ಮನೆ ಅಪರಾಧ ಲಾರಿಯಲ್ಲಿ ಜೆಸಿಬಿ ಸಾಗಿಸುವಾಗ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

ಲಾರಿಯಲ್ಲಿ ಜೆಸಿಬಿ ಸಾಗಿಸುವಾಗ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

0

ಮಾನ್ವಿ (ರಾಯಚೂರು): ತಾಲೂಕಿನ ಯಡಿವಾಳ ಕ್ರಾಸ್ ಬಳಿ ಲಾರಿಯ ಮೇಲೆ ಜೆಸಿಬಿ ಸಾಗಿಸುವಾಗ 11 ಕೆ.ವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಶಾಕ್ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಘಟನೆಯಲ್ಲಿ ಜಾರ್ಖಂಡ್ ಮೂಲದ ಅಜಯ್ ಮೃತಪಟ್ಟಿದ್ದಾನೆ. ವಿದ್ಯುತ್ ಶಾಕ್ ನಿಂದ ಬೆಂಕಿ ಹೊತ್ತಿಕೊಂಡು ಲಾರಿಯ ಟೈರ್ ಸುಟ್ಟು ಹೋಗಿವೆ.

ಘಟನೆ ಸ್ಥಳದಲ್ಲಿ ಸುತ್ತಮುತ್ತಲಿದ್ದ ರೈತರು ಕೂಡಲೇ ಅಗ್ನಿಶಾಮಕ ಇಲಾಖೆಗೆ ಮತ್ತು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.