ಮನೆ ಸ್ಥಳೀಯ ಹೆಚ್ .ಡಿ ಕೋಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಹಾಗೂ ಪರಿಶೀಲನೆ

ಹೆಚ್ .ಡಿ ಕೋಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಹಾಗೂ ಪರಿಶೀಲನೆ

0

ಮೈಸೂರು: ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಅವರು ಇಂದು ಹೆಚ್. ಡಿ ಕೋಟೆ ತಾಲ್ಲೂಕು ಕಚೇರಿ ಹಾಗೂ ಸರಗೂರಿನ ಹಂಪಾಪುರ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿ ಕಚೇರಿಯ ಸಮಸ್ಯೆ, ಆಡಳಿತ ಕಾರ್ಯಗಳ ಪ್ರಗತಿ ಪರಿಶೀಲಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಪೌತಿಖಾತೆ ಆಂದೋಲನವನ್ನು ಯಶಸ್ವಿಗೊಳಿಸುವಂತೆ, ಕೆರೆ ಒತ್ತುವರಿ ತೆರವು ಗೊಳಿಸುವಂತೆ, ಬಗರ್ ಹುಕುಂ ಮಂಜೂರಾತಿ ಕೋರಿ ಬಂದಿರುವ ಅರ್ಜಿಗಳ ವಿಲೇವಾರಿ ಬಗ್ಗೆ ಆಪ್ ಮೂಲಕ ಕ್ರಮ ವಹಿಸುವಂತೆ ಕಚೇರಿಯ ಅಧಿಕಾರಿಗಳಿಗೆ ಸೂಚಿಸಿದರು.

ಸಕಾಲ ಅರ್ಜಿಗಳ ವಿಲೇವಾರಿ ಬಗ್ಗೆ ಕ್ರಮ ವಹಿಸಿ, ಭೂಮಿ ತಂತ್ರಾಶದಲ್ಲಿ ಖಾತೆ ಕಡತಗಳ ವಿಲೇವಾರಿಯನ್ನು ವಿಳಂಬ ಮಾಡದೆ ತ್ವರಿತವಾಗಿ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆಗಳನ್ನು ಪರಿಶೀಲಿಸಿಕೊಂಡು ವರದಿ ಮಾಡುವಂತೆ, ಇ-ಆಫೀಸ್ ತೆರೆದು ಕಂಪ್ಯೂಟರ್ ಮೂಲಕ ಕಡತಗಳ ವಿಲೇವಾರಿ ಮಾಡುವಂತೆ ಉಪತಹಶಿಲ್ದಾರ್ ಅವರಿಗೆ ಮತ್ತು ರಾಜಸ್ವ ನಿರೀಕ್ಷಕರಿಗೆ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯೂ ಗ್ರಾಮದಲ್ಲಿ ಎಲ್ಲರಿಗೂ ತಲುಪಿದೆ ಎಂಬುದರ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್ ಹಾಗೂ ಉಪತಹಶಿಲ್ದಾರ್ ಮತ್ತು ರಾಜಸ್ವ ನಿರೀಕ್ಷಕರು ಉಪಸ್ಥಿತರಿದ್ದರು.