ಮೈಸೂರು: ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಅವರು ಇಂದು ಹೆಚ್. ಡಿ ಕೋಟೆ ತಾಲ್ಲೂಕು ಕಚೇರಿ ಹಾಗೂ ಸರಗೂರಿನ ಹಂಪಾಪುರ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿ ಕಚೇರಿಯ ಸಮಸ್ಯೆ, ಆಡಳಿತ ಕಾರ್ಯಗಳ ಪ್ರಗತಿ ಪರಿಶೀಲಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಪೌತಿಖಾತೆ ಆಂದೋಲನವನ್ನು ಯಶಸ್ವಿಗೊಳಿಸುವಂತೆ, ಕೆರೆ ಒತ್ತುವರಿ ತೆರವು ಗೊಳಿಸುವಂತೆ, ಬಗರ್ ಹುಕುಂ ಮಂಜೂರಾತಿ ಕೋರಿ ಬಂದಿರುವ ಅರ್ಜಿಗಳ ವಿಲೇವಾರಿ ಬಗ್ಗೆ ಆಪ್ ಮೂಲಕ ಕ್ರಮ ವಹಿಸುವಂತೆ ಕಚೇರಿಯ ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲ ಅರ್ಜಿಗಳ ವಿಲೇವಾರಿ ಬಗ್ಗೆ ಕ್ರಮ ವಹಿಸಿ, ಭೂಮಿ ತಂತ್ರಾಶದಲ್ಲಿ ಖಾತೆ ಕಡತಗಳ ವಿಲೇವಾರಿಯನ್ನು ವಿಳಂಬ ಮಾಡದೆ ತ್ವರಿತವಾಗಿ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆಗಳನ್ನು ಪರಿಶೀಲಿಸಿಕೊಂಡು ವರದಿ ಮಾಡುವಂತೆ, ಇ-ಆಫೀಸ್ ತೆರೆದು ಕಂಪ್ಯೂಟರ್ ಮೂಲಕ ಕಡತಗಳ ವಿಲೇವಾರಿ ಮಾಡುವಂತೆ ಉಪತಹಶಿಲ್ದಾರ್ ಅವರಿಗೆ ಮತ್ತು ರಾಜಸ್ವ ನಿರೀಕ್ಷಕರಿಗೆ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯೂ ಗ್ರಾಮದಲ್ಲಿ ಎಲ್ಲರಿಗೂ ತಲುಪಿದೆ ಎಂಬುದರ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್ ಹಾಗೂ ಉಪತಹಶಿಲ್ದಾರ್ ಮತ್ತು ರಾಜಸ್ವ ನಿರೀಕ್ಷಕರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.