ಮನೆ ಅಪರಾಧ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪಟ್ಟಣ ಬಳಿಯ ನೆಕ್ಕಿಲಾಡಿ ಕುರ್ವೇಲುನ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಜಾ (17) ಮೃತ ದುರ್ದೈವಿ.

ಉಪ್ಪಿನಂಗಡಿ ನಿವಾಸಿ, ಉದ್ಯಮಿ ದಾವೂದ್ ಎಂಬವರ ಪುತ್ರಿ ಹಫೀಜಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ (ಫೆ.15) ಹಫೀಜಾ ತಡರಾತ್ರಿವರೆಗೂ ವಿದ್ಯಭ್ಯಾಸ ಮಾಡಿ, ಮಲಗಿದ್ದಾರೆ. ಆದರೆ ಬೆಳಿಗ್ಗೆ ಏಳಲೇ ಇಲ್ಲ. ಮಲಗಿದ ಸ್ಥಿತಿಯಲ್ಲೆ ಮೃತಪಟ್ಟಿದ್ದಾರೆ.