ಮನೆ ರಾಜ್ಯ ಮದ್ಯಪ್ರಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ: ಮತ್ತೆ ಮದ್ಯ ಬೆಲೆ ಹೆಚ್ಚಳ

ಮದ್ಯಪ್ರಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ: ಮತ್ತೆ ಮದ್ಯ ಬೆಲೆ ಹೆಚ್ಚಳ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 2024-25ರ ಸಾಲಿನ ಆಯವ್ಯಯ ಪಟ್ಟಿಯನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 15ನೇ ಬಜೆಟ್ ಇದಾಗಿದೆ.

ಬಜೆಟ್ ಆರಂಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ನನ್ನ ನಂಬಿಕೆ ದೃಢವಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಮತ್ತು ಬಡವರ ಅಭಿವೃದ್ದಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆಲ ದಿನಗಳ ಹಿಂದೆಯಷ್ಟೇ ಬಿಯರ್ ಬೆಲೆ ಹೆಚ್ಚಿಸಿದ್ದ ಸರ್ಕಾರ ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಬಿಯರ್‌ ಸ್ಲ್ಯಾಬ್‌ ದರ ಪರಿಷ್ಕರಣೆ ಮಾಡಲಾಗಿದೆ. ಬಿಯರ್ ಸೇರಿ ಎಲ್ಲಾ ಬ್ರ್ಯಾಂಡ್ ಗಳ ಬೆಲೆ ಹೆಚ್ಚಳ ಮಾಡಲಾಗಿದೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IMl ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗಿದೆ.

ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಸಿದ್ದರಾಮಯ್ಯ ಅವರ ಕೇಂದ್ರದ ವಿರುದ್ಧದ ಆರೋಪಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಲಾಟೆಯ ಮಧ್ಯೆಯೇ ಸಿದ್ದರಾಮಯ್ಯ ಅವರು ಬಜೆಟ್‌ ಭಾಷಣ ಮುಂದುವರಿಸಿದರು.