ಮನೆ ರಾಷ್ಟ್ರೀಯ ದೆಹಲಿಯ ಪೇಂಟ್ ತಯಾರಿಕೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 11 ಮಂದಿ ಸಾವು

ದೆಹಲಿಯ ಪೇಂಟ್ ತಯಾರಿಕೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 11 ಮಂದಿ ಸಾವು

0

ನವದೆಹಲಿ: ದೆಹಲಿಯ ಹೊರವಲಯದ ಅಲಿಪುರದಲ್ಲಿರುವ ಬಣ್ಣ (ಪೇಂಟ್) ತಯಾರಿಕೆ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ ಸುಟ್ಟು ಕರಕಲಾದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಜತೆಗೆ ರಕ್ಷಣಾ ಕಾರ್ಯಾಚರಣೆಯ ವೇಳೆ ಗಾಯಗೊಂಡಿದ್ದ ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಫೋಟದಿಂದಾಗಿ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ರಾತ್ರಿ 9 ಗಂಟೆಯ ವೇಳೆಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಕೆಲವರು ನಾಪತ್ತೆಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.