ಪಾಂಡವಪುರ:ಪಟ್ಟಣದ ಹಿರೋಡೆ ಕೆರೆಯಲ್ಲಿ ಅಪರಿಚಿತ ಮಹಿಳೆ ಮತ್ತು ಪುರುಷನ ಮೃತದೇಹಗಳು ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪಟ್ಟಣದ ನಾಗಮಂಗಲ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಹಿರೋಡೆ ಕೆರೆಯ ದಡದ ಕೆಸರಿನಲ್ಲಿ ಮಹಿಳೆ ಮತ್ತು ಪುರುಷನ ಮೃತದೇಹಗಳು ತಬ್ಬಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೆರೆಯ ಪಕ್ಕದಲ್ಲಿ ಸ್ಥಳೀಯರು ಎಮ್ಮೆಯನ್ನು ಮೇಯಲು ಕಟ್ಟುಹಾಕಲು ಬಂದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಮೃತಪಟ್ಟಿರುವ ಗಂಡು ಹಾಗೂ ಮಹಿಳೆಗೆ ೪೫-೫೦ ವರ್ಷ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಮೃತ ದೇಹಗಳು ಕೆರೆಯ ದಡದಲ್ಲಿರುವ ಕೆಸರಿನಲ್ಲಿ ಬಿದ್ದಿರುವುದರಿಂದ ಇದು ಕೊಲೆಯೋ? ಇಲ್ಲಾ ಆತ್ಮಹತ್ಯೆಯೋ? ಎಂಬ ಹಲವು ಅನುಮಾನಗಳು ವ್ಯಕ್ತವಾಗಿವೆ.
ಎರಡು ಮೃತ ದೇಹಗಳು ತಬ್ಬಿಕೊಂಡಿರುವ ಸ್ಥಿತಿಯಲ್ಲಿ ದೊರಕಿರುವುದರಿಂದ ಇವರು ಗಂಡ-ಹೆಂಡತಿ ಇರುಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಎರಡು ಮೃತದೇಹಗಳು ಊದುಕೊಂಡಿರುವುದರಿಂದ, ಇವರು ಮೃತಪಟ್ಟು ಮೂರ್ನಾಲ್ಕು ದಿನಗಳಾಗಿರಬಹುದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತಪಟ್ಟಿರುವ ಮಹಿಳೆಯು ಸೀರೆ, ರವಿಕೆ ಹಾಕಿದ್ದಾರೆ. ಪುರುಷನು ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದಾರೆ. ಸಂಬಂಧಿಸಿದವರು ಹತ್ತಿರದ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಸಬ್ಇನ್ಸ್ಪೆಕ್ಟರ್ ಧನಲ್ಪಾಲ್ ತಿಳಿಸಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.