ಮನೆ ಅಪರಾಧ ರಾಮನಗರ: ಮನೆಯಲ್ಲೇ ಮಹಿಳಾ ಕಾನ್ ಸ್ಟೇಬಲ್ ನೇಣಿಗೆ ಶರಣು

ರಾಮನಗರ: ಮನೆಯಲ್ಲೇ ಮಹಿಳಾ ಕಾನ್ ಸ್ಟೇಬಲ್ ನೇಣಿಗೆ ಶರಣು

0

ರಾಮನಗರ : ಮನೆಯಲ್ಲೇ ಮಹಿಳಾ ಕಾನ್ ಸ್ಟೇಬಲ್ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.

ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 27) ಆತ್ಮಹತ್ಯೆ ಮಾಡಿಕೊಂಡ ಕಾನ್ ಸ್ಟೇಬಲ್.

ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾರೋಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.