ಮನೆ ರಾಷ್ಟ್ರೀಯ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಆಮ್ ಆದ್ಮಿ ಪಕ್ಷ

ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಆಮ್ ಆದ್ಮಿ ಪಕ್ಷ

0

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದಿದೆ.

ಶನಿವಾರ ಧ್ವನಿ ಮತದ ಮೂಲಕ ವಿಶ್ವಾಸಮತ ಯಾಚನೆ ನಿರ್ಣಯವನ್ನು ಅಂಗೀಕರಿಸಲಾಗಿದೆ. 

ಮದ್ಯದ ಅಬಕಾರಿ ನೀತಿಗೆ ಸಂಬಂಧಿಸಿದ ಆಪಾದಿತ ಹಗರಣದ ಕುರಿತು ಅವರು ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಎದುರಿಸುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

70 ಸದಸ್ಯ ಬಲದ ವಿಧಾನಸಭೆಯಲ್ಲಿ ಕೇಜ್ರಿವಾಲ್ ಸರ್ಕಾರ ಎರಡನೇ ಬಾರಿಗೆ ವಿಶ್ವಾಸಮತ ಯಾಚಿಸಿದೆ. ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) 62 ಶಾಸಕರೊಂದಿಗೆ ಬಹುಮತವನ್ನು ಹೊಂದಿದ್ದು, ಬಿಜೆಪಿ ಎಂಟು ಶಾಸಕರನ್ನು ಹೊಂದಿದೆ. ಕೇಜ್ರಿವಾಲ್ ಅವರು ನಿರ್ಣಯ ಮಂಡಿಸುವಾಗ, ಬಿಜೆಪಿ ಸದಸ್ಯರು ಎಎಪಿ ಶಾಸಕರಿಗೆ ಪಕ್ಷಾಂತರ ಮಾಡಲು ಭಾರಿ ಮೊತ್ತದ ಹಣವನ್ನು ಲಂಚ ನೀಡುವ ಪ್ರಯತ್ನಗಳನ್ನು ಉಲ್ಲೇಖಿಸಿದ್ದಾರೆ. ತಮ್ಮ ಶಾಸಕರಿಗೆ ತಲಾ 25 ಕೋಟಿ ರೂ.ಗಳ ಭರವಸೆ ನೀಡಲಾಯಿತು ಎಂದಿದ್ದಾರೆ ಕೇಜ್ರಿವಾಲ್.

ನಮಗೆ ಸದನದಲ್ಲಿ ಬಹುಮತವಿದೆ ಆದರೆ ಬಿಜೆಪಿಯು ಎಎಪಿ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿರುವ ಕಾರಣ ಈ ವಿಶ್ವಾಸ ಮತಯಾಚನೆ ನಿರ್ಣಯದ ಅಗತ್ಯವಿತ್ತು. ಬಿಜೆಪಿಯವರು ರಾಮಭಕ್ತರು ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಮ್ಮ ಆಸ್ಪತ್ರೆಗಳಲ್ಲಿ ಬಡವರ ಔಷಧಿಗಳನ್ನು ನಿಲ್ಲಿಸಿದರು. ನಾವು ಸರ್ಕಾರವನ್ನು ನಡೆಸುತ್ತಿದ್ದರೂ ಅವರು ಸೇವಾ ಇಲಾಖೆ, ಅಧಿಕಾರಿಗಳ ಮೇಲಿನ ನಿಯಂತ್ರಣದ ಮೂಲಕ ನಮ್ಮ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಎಎಪಿ ದೇಶವನ್ನು ಬಿಜೆಪಿ ಮುಕ್ತಗೊಳಿಸಲಿದೆ

“ಬಿಜೆಪಿಗೆ ಎಎಪಿ ಅತಿದೊಡ್ಡ ಸವಾಲಾಗಿದೆ, ಅದಕ್ಕಾಗಿಯೇ ಅದು ಎಲ್ಲಾ ಕಡೆಯಿಂದ ದಾಳಿಗೆ ಒಳಗಾಗುತ್ತಿದೆ. ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಗೆದ್ದರೂ 2029ರ ಚುನಾವಣೆಯಲ್ಲಿ ಎಎಪಿ ದೇಶವನ್ನು ಬಿಜೆಪಿಯಿಂದ ಮುಕ್ತಗೊಳಿಸಲಿದೆ. ನನಗೆ ಸಮನ್ಸ್ ನೀಡುವ ಮೂಲಕ ಎಎಪಿಯನ್ನು ಅಂತ್ಯಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಅವರು ನನ್ನನ್ನು ಬಂಧಿಸಲು ಯೋಜಿಸುತ್ತಿದ್ದಾರೆ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.