ಮನೆ ಅಪರಾಧ ಚಾಲಕನ‌ ನಿಯಂತ್ರಣ ತಪ್ಪಿ ಕಾರು, ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ: ಓರ್ವನಿಗೆ ಗಾಯ

ಚಾಲಕನ‌ ನಿಯಂತ್ರಣ ತಪ್ಪಿ ಕಾರು, ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ: ಓರ್ವನಿಗೆ ಗಾಯ

0

ಮಂಗಳೂರು: ಅತೀ ವೇಗದಿಂದ ಬಂದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಇನ್ನೊಂದು ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಢಿಕ್ಕಿಯಾದ ಘಟನೆ ನಗರದ ಕೊಡಿಯಾಲ್‌ ಬೈಲ್ ನವಭಾರತ ವೃತ್ತದ ಬಳಿ ಸಂಭವಿಸಿದೆ.

ಘಟನೆಯಲ್ಲಿ ವ್ಯಕ್ತಿಯೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಮೂರು ದ್ವಿಚಕ್ರ ವಾಹನಗಳು, ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಇನ್ನೊಂದು ಕಾರು ಜಖಂಗೊಂಡಿದೆ. ಕಾರನ್ನು ಮಹಿಳೆಯೊಬ್ಬರು ಚಲಾಯಿಸುತ್ತಿದ್ದು, ಬ್ರೇಕ್ ಬದಲು ಆ್ಯಕ್ಸಿಲರೇಟರ್ ಅದುಮಿರುವ ಸಾಧ್ಯತೆಯಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.