ಮನೆ ರಾಜ್ಯ ಗೌತಮ ಕ್ಷೇತ್ರದಲ್ಲಿ ಫೆ.24 ರಂದು 266ನೇ ಪೌರ್ಣಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ

ಗೌತಮ ಕ್ಷೇತ್ರದಲ್ಲಿ ಫೆ.24 ರಂದು 266ನೇ ಪೌರ್ಣಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ

0

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನ ಕೊಪ್ಪಲಿನ ಗೌತಮ ಕ್ಷೇತ್ರದಲ್ಲಿ ಫೆ.24 ರಂದು 266ನೇ ಪೌರ್ಣಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜಾ, ಶ್ರೀ ಅನ್ನಪೂರ್ಣೇಶ್ವರಿ ಹೋಮ ಹಾಗೂ ಗೀತಾ ಪಾರಾಯಣ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಶ್ರೀ ಕೃಷ್ಣಾನಂದ ಭಾರತಿ ಸ್ವಾಮಿ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಸೇವಾ ಟ್ರಸ್ಟ್  ಆಶ್ರಯದಲ್ಲಿ ಗ್ರಾಮಗಳಲ್ಲಿ ನಗರಗಳಲ್ಲಿ ಜಾತ್ಯಾತೀತ, ಪಕ್ಷಾತೀತ, ಪ್ರೀತಿ, ವಿಶ್ವಾಸ, ಏಕತೆಗಾಗಿ ಮತ್ತು ಗ್ರಾಮಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ ಗಾಗಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ಗಜಾನನ ಸ್ವಾಮಿಗಳು ಉಪನ್ಯಾಸ ನಡೆಸಿಕೊಡಲಿದ್ದು, ಕಾರ್ಯಕ್ರಮ ಬೆಳಿಗ್ಗೆ 9 ಗಂಟೆಗೆ ನಡೆಯಲಿದ್ದು,  ಮಹಾಮಂಗಳಾರತಿ ಮತ್ತು ಅನ್ನ ಸಂತರ್ಪಣೆ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮಕ್ಕೆ ಕಿರಂಗೂರು ಗ್ರಾಮಸ್ಥರು ಸೇವಾರ್ಥವಿರಲಿದೆ. ಹೆಚ್ಚಿನ ಮಾಹಿತಿಗಾಗಿ ಗೌತಮ ಕ್ಷೇತ್ರದ ಅಧ್ಯಕ್ಷ ಹಾಗೂ ಟ್ರಸ್ಟಿ ಶ್ರೀ ಗಜಾನನ ಸ್ವಾಮಿ ದೂ.9980992037ನ್ನು ಸಂಪರ್ಕಿಸಬಹುದು.