ಮನೆ ರಾಜ್ಯ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂ. ಅಪಘಾತ ವಿಮೆ

ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂ. ಅಪಘಾತ ವಿಮೆ

0

ಬೆಂಗಳೂರು: ಕೆಎಸ್ ​ಆರ್ ​ಟಿಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ.

ಈ ಕುರಿತು ಮಾತನಾಡಿದ ಬಿಎಂಟಿಸಿ ಎಂಡಿ ರಾಮಚಂದ್ರನ್. ಆರ್, ಕೆಎಸ್ ​ಆರ್​ ಟಿಸಿ ನೌಕರರು ಸಾವನ್ನಪ್ಪಿದರೆ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿ ನೌಕರರಿಗೆ ಕೇವಲ ಮೂರು ಲಕ್ಷ ರುಪಾಯಿ ಪರಿಹಾರವಿತ್ತು. ಇದೀಗ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದೆ ಎಂದರು.

ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಈ ವಿಮಾ ಸೌಲಭ್ಯ ದೊರೆಯಲಿದೆ. ಬಿಎಂಟಿಸಿಯ ನೌಕರರು ಕರ್ತವ್ಯದಲ್ಲಿರುವಾಗ ಮತ್ತು ಕರ್ತವ್ಯದಲ್ಲಿಲ್ಲದಿದ್ದಾಗಲೂ ಸಂಭವಿಸುವ ಅಪಘಾತಕ್ಕೂ 1 ಕೋಟಿ 15 ಲಕ್ಷ ರೂಪಾಯಿ ಪರಿಹಾರ ಸಿಗುತ್ತದೆ. ಸಿಬ್ಬಂದಿ ಸಾಮಾನ್ಯವಾಗಿ ಸಾವನ್ನಪ್ಪಿದರೆ 10 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ ಎಂದರು.