ಮೈಸೂರು: ಸರ್ವಜ್ಞನ ವಚನಗಳು ತ್ರಿಪದಿಗಳೆಂದೇ ಪ್ರಸಿದ್ಧಿಯಾಗಿದೆ. ಹಲವಾರು ಅಂಶಗಳನ್ನು ಕುರಿತು ವಚನಗಳನ್ನು ರಚನೆ ಮಾಡಿದ ಒಬ್ಬ ಮೇಧಾವಿ ವಚನಕಾರರಾಗಿದ್ದಾರೆ. ಸಮಾಜದಲ್ಲಿನ ಅಂಕು ಡೊಂಕುಗಳನ್ನು, ಮೂಢನಂಬಿಕೆಗಳನ್ನು ಹಳೆಯ ಸಂಪ್ರoದಾಯಗಳು ಮತ್ತು ಕಟ್ಟಾಚಾರ ಕುರಿತು ತನ್ನ ವಚನಗಳಲ್ಲಿ ಪ್ರಸ್ತುತ ಪಡಿಸಿದ್ದಾರೆ. ಸರ್ವರಿಗೂ ಸರ್ವಕಾಲಕ್ಕೂ ಅನ್ವಯವಾಗುವ ವಚನಗಳನ್ನು ಸರ್ವಜ್ಞ ರಚಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಯಾದ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಕಲಾಮಂದಿರದ ಆವರಣದ ಕಿರುರಂಗಮoದಿರದಲ್ಲಿ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಮಾದರಿಯಾಗುವ ನಿಟ್ಟಿನಲ್ಲಿ ಜಯಂತಿಗಳನ್ನು ನಾವು ಆಚರಣೆ ಮಾಡಬೇಕು. 12ನೇ ಶತಮಾನದಲ್ಲಿ ಕನ್ನಡದ ವಚನ ಸಾಹಿತ್ಯ ಕಬ್ಬಿಣದ ಕಡಲೆಯಾಗಿತ್ತು, ನಂತರದ ಕಾಲಮಾನದಲ್ಲಿ ಸರ್ವಜ್ಞನ ವಚನಗಳು ಸುಲಭ ರೀತಿಯಲ್ಲಿ ಜನ ಸಾಮಾನ್ಯರಿಗೂ ಅರ್ಥವಾಗುವಂತಹ ರೀತಿಯಲ್ಲಿ ತ್ರಿಪದಿಗಳನ್ನು ರಚಿಸಿದ್ದಾರೆ. ಸರ್ವಜ್ಞನ ವಚನಗಳಲ್ಲಿರುವ ಆದರ್ಶ ತತ್ವಗಳು, ಸಮಾಜದಲ್ಲಿರುವ ಅನಾಚಾರಗಳನ್ನು ತಿದ್ದುವ ಕೆಲಸ ಮಾಡುತ್ತಿದೆ. ಉತ್ತಮವಾದ ಸಮಾಜವನ್ನು ಬಲಪಡಿಸುವಂತಹ ಸಾರಾಂಶಗಳು ಇವರ ತ್ರಿಪದಿಗಳಲ್ಲಿ ಇದೆ ಎಂದರು.
ಪ್ರತಿಯೊoದು ತ್ರಿಪದಿಗಳು ಸಹ ವೈಜ್ಞಾನಿಕವಾದ ವಿಮರ್ಶೆಯನ್ನು ಒಳಗೊಂಡಿದ್ದು , ಸರ್ವ ಕಾಲಕ್ಕೂ ಅನ್ವಯಿಸುವ ತತ್ವಗಳನ್ನು ಕವಿ ಸರ್ವಜ್ಞ ಕೊಟ್ಟಿದ್ದಾರೆ. ಇದು ಕೇವಲ ಒಂದೇ ಸಮಾಜಕ್ಕೆ ಅಥವಾ ಸಮುದಾಯಕ್ಕೆ ಸೀಮಿತವಲ್ಲ ಸರ್ವ ಜನರಿಗೂ ಅನ್ವಯಿಸುತ್ತದೆ ಎಂದರು.
ಮುಖ್ಯ ಭಾಷಣಕಾರರಾಗಿ, ಕೆ. ಆರ್. ನಗರ ತಾಲೂಕಿನ ಕರ್ನಾಟಕ ಜಾನಪದ ಪರಿಷತ್ನ ಅಧ್ಯಕ್ಷರಾದ ಪ್ರಭಾಕರ್ ಹೆಗ್ಗಂದೂರ್ ರವರು ಮಾತನಾಡಿ, ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕುಡೊoಕುಗಳನ್ನು ತಿದ್ದಿದ ಸಮಾಜ ಸುಧಾರಕ, ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ವಚನಕಾರ ಎಂದರು.
ತ್ರಿಪದಿಗಳ ಮೂಲಕ ಸರ್ವಜ್ಞ ಎಲ್ಲರ ಮನದಲ್ಲಿ ಉಳಿದಿದ್ದಾರೆ, ತ್ರಿಪದಿಗಳು ಸಾರುವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ .ಸಾಗರದಂತಹ ದೊಡ್ಡ ವಿಷಯದ ಅಂಶಗಳನ್ನು ಸಾಸಿವೆ ಗಾತ್ರದಲ್ಲಿ ಅರ್ಥೈಸುವ ಸಂತ ಕವಿ ಸರ್ವಜ್ಞ. ತನಗೆ ತಿಳಿದದ್ದನ್ನು ಹಾಗೂ ನೋಡಿದ್ದನ್ನು ತ್ರಿಪದಿ ಮೂಲಕ ಬರೆದವರು ಸರ್ವಜ್ಞ ಎನ್ನುತ್ತಾ ಸರ್ವಜ್ಞನ ಕೆಲವು ಜನಪ್ರಿಯ ತ್ರಿಪದಿಗಳನ್ನು ಅವುಗಳ ಸಾರಾಂಶವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ. ಎಸ್ ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ ಸುದರ್ಶನ್, ಕುಂಬಾರ ಸಂಘದ ಜಿಲ್ಲಾ ಅಧ್ಯಕ್ಷರಾದ ಪ್ರಕಾಶ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಆರ್ ಸೋಮಶೇಖರ್ ಮಹಿಳಾ ಸಂಘದ ಅಧ್ಯಕ್ಷರಾದ ರೇಣುಕಾಂಬ, ಸರ್ವಜ್ಞ ಸೇವಾ ಸಮಿತಿನ ಅಧ್ಯಕ್ಷರಾದ ವಾಸು, ಹಾಗೂ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.