ಮನೆ ಸ್ಥಳೀಯ ಹುಣಸೂರು: ರೈತ ಮಹಿಳೆಗೆ ಹಾವು ಕಚ್ಚಿ ಸಾವು

ಹುಣಸೂರು: ರೈತ ಮಹಿಳೆಗೆ ಹಾವು ಕಚ್ಚಿ ಸಾವು

0

ಹುಣಸೂರು: ಕೃಷಿ ಚಟುವಟಿಕೆ ತೊಡಗಿಸಿಕೊಂಡಿದ್ದ ವೇಳೆ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಚಿಲ್ಕುಂದ ಬಳಿಯ ಹೊಸಕೊಪ್ಪಲಿನ ಕೃಷ್ಣೇಗೌಡರ ಪತ್ನಿ ರೈತ ಮಹಿಳೆ ಸಣ್ಣಮ್ಮ(58) ಮೃತ ಮಹಿಳೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಸೋಮವಾರ ಸಂಜೆ ತಮ್ಮ ಜಮೀನಿನಲ್ಲಿ ರಾಗಿ ಕೊಯ್ಲು ಮಾಡುತ್ತಿದ್ದ ವೇಳೆ ಹಾವು ಕಚ್ಚಿದೆ. ತಕ್ಷಣವೇ ಇವರ ಪುತ್ರ ಸಂಜು ಹುಣಸೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.