ಬೆಂಗಳೂರು: ಬಿಜೆಪಿ ಜತೆಗೆ ಸಖ್ಯ ಬೆಳೆಸಿರುವ ಜೆಡಿಎಸ್ ಮುಂದಿನ ಲೋಕಸಭೆ ಚುನಾವಣೆಯ ಕ್ಷೇತ್ರ ಹಂಚಿಕೆಯಲ್ಲಿ ಮೊದಲ ಮೇಲುಗೈ ಸಾಧಿಸಿದೆ. ಎಚ್ ಡಿ ಕುಮಾರಸ್ವಾಮಿ ಅವರು ಅಂದುಕೊಂಡಂತೆ ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಧುರೀಣ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಸೀಟು ಹಂಚಿಕೆ ಮಾತುಕತೆಗಾಗಿ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಎಚ್ ಡಿಕೆ ಮೊದಲ ಹಂತದ ಸೀಟು ಹಂಚಿಕೆ ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವರದಿಯ ಪ್ರಕಾರ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಶಾ ಸಮ್ಮತಿಸಿದ್ದಾರೆ. ಉಳಿದ ಕ್ಷೇತ್ರಗಳ ಬಗ್ಗೆ ಇನ್ನಷ್ಟೇ ಅಂತಿಮವಾಗಲಿದೆ.
ಮೈತ್ರಿ ಅಂತಿಮವಾದ ಬಳಿಕ ಜೆಡಿಎಸ್ ಐದರಿಂದ ಆರು ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ ಎನ್ನಲಾಗಿತ್ತು. ಐದು ಕ್ಷೇತ್ರಗಳು ಅಂತಿಮವಾಗಿದೆ ಎನ್ನುವ ವರದಿಯೂ ಬಂದಿತ್ತು. ಹಾಸನ ಮತ್ತು ಮಂಡ್ಯ ಕ್ಷೇತ್ರಗಳ ಬಗ್ಗೆ ಎಚ್ ಡಿಕೆ ಒಲವು ಹೊಂದಿದ್ದರು. ಆದರೆ ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸ್ಥಳೀಯ ನಾಯಕರು ಇದಕ್ಕೆ ವಿರೋಧ ಹೊಂದಿದ್ದರು. ಹಾಸನದಲ್ಲಿ ಪ್ರೀತಮ್ ಗೌಡ ಅವರು ಮೈತ್ರಿ ಬಗ್ಗೆ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.