ಬೆಂಗಳೂರು: ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ.
ಈ ಸಂಬಂಧ ಶುಕ್ರವಾರ ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಸ್.ಟಿ.ಸೋಮಶೇಖರ್, ಶ್ರೀನಿವಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು,ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೃಹತ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಇದೇ ತಿಂಗಳ 29ರಿಂದ ಮಾ.9ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ರಾಷ್ಟ್ರೀಯ ಸರಸ್ ಮೇಳವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಲ್ಲಿ ದೇಶಾದ್ಯಂತದ 250 ಸ್ವ-ಸಹಾಯ ಗುಂಪುಗಳು ಭಾಗವಹಿಸಲಿವೆ. ಗುಂಪುಗಳು ಉತ್ಪಾದಿಸಿದ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತವೆ.p
ಈ ಕಾರ್ಯಕ್ರಮವು ಕರ್ನಾಟಕದಾದ್ಯಂತ ವಿವಿಧ ರೀತಿಯ ಕರಕುಶಲ ವಸ್ತುಗಳನ್ನು ಮತ್ತು ವಿವಿಧ ರೀತಿಯ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸುತ್ತದೆ. ಕಾರ್ಯಕ್ರಮವು ವಿವಿಧ ಗಣ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಒಳಗೊಂಡಿರುತ್ತದೆ ಎಂದು ಮಾಹಿತಿ ನೀಡಿದರು.
ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಉದ್ಘಾಟಿಸಲಿದ್ದಾರೆ. ಸರ್ಕಾರ ಈ ಮೇಳಕ್ಕೆ ವಿಶೇಷವಾದ ಒತ್ತು ಕೊಟ್ಟಿದೆ. ಏಕೆಂದರೆ ಬದಲಾವಣೆಯಾಗುವುದಾದರೆ ಅದು ಮಹಿಳೆಯರಿಂದ ಸಾಧ್ಯ ಎಂಬುದು ನಮ್ಮ ಸರ್ಕಾರಕ್ಕೆ ಅರ್ಥವಾಗಿದೆ. ಹಾಗಾಗಿ ಇದಕ್ಕೆ ವಿಶೇಷ ಒತ್ತು ಕೊಟ್ಟಿದ್ದೇವೆ ಎಂದು ಪಾಟೀಲ್ ತಿಳಿಸಿದರು.
ಬೃಹತ್ ಉದ್ಯೋಗ ಮೇಳ
ಈಗಾಗಲೇ ನಿಗದಿಯಾಗಿರುವಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 22 ದಿನಗಳ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಒಂದೇ ಸೂರಿನಡಿ ಉದ್ಯೋಗ ಕಲ್ಪಿಸಿಕೊಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ನಮ್ಮ ಸಿದ್ದತೆಗಳು ಮುಕ್ತಾಯ ಹಂತದಲ್ಲಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.
ಡಿ.ಕೆ.ಶಿವಕುಮಾರ್ ಮಾತನಾಡಿ, ಈ ರೀತಿಯ ಕರಕುಶಲ ವಸ್ತು ಪ್ರದರ್ಶನ ಬೆಂಗಳೂರಿನಲ್ಲಿ ಇಡೀ ವರ್ಷ ನಡೆಯಲು ಅನುಕೂಲವಾಗುವಂತೆ ಶಾಶ್ವತ ಪ್ರದರ್ಶನ ಕೇಂದ್ರಕ್ಕೆ ಸ್ಥಳಾವಕಾಶ ಕಲ್ಪಿಸಲು ಹುಡುಕಾಟ ನಡೆಯುತ್ತಿದೆ. ಬ್ರಾಂಡ್ ಬೆಂಗಳೂರು ಅಭಿಯಾನದಡಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗಿತ್ತಿದೆ ಎಂದರು.
ಬೇರೆ ರಾಜ್ಯಗಳಿಂದ 100 ಮಹಿಳೆಯರು ಮಳಿಗೆಗಳನ್ನು ಹಾಕುತ್ತಿದ್ದಾರೆ ನಮ್ಮ ರಾಜ್ಯದ ಮಹಿಳೆಯರು ಸಹ 150 ಮಳಿಗೆಯನ್ನು ಹಾಕುತ್ತಿದ್ದಾರೆ ಪಾಟೀಲ್ ಮಾಹಿತಿ ನೀಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.