ಈಗಾಗಲೇ ಹಾಡು ಮತ್ತು ಟೀಸರ್ ಮೂಲಕ ಗಮನ ಸೆಳೆದಿರುವ ‘ಕೆರೆಬೇಟೆ’ ಚಿತ್ರತಂಡ ಈಗ ಟ್ರೇಲರ್ ರಿಲೀಸ್ ಮಾಡಿದೆ.
ಈ ಸಿನಿಮಾದ ಕಥಾವಸ್ತು ಡಿಫರೆಂಟ್ ಆಗಿದೆ. ಮಲೆನಾಡಿನ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಅದರಲ್ಲೂ ವಿಶೇಷವಾಗಿ ಮೀನು ಬೇಟೆಯ ಬಗ್ಗೆ ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ. ಹಾಗಂತ ‘ಕೆರೆಬೇಟೆ’ ಸಿನಿಮಾದ ಕಥೆ ಅಷ್ಟಕ್ಕೇ ಸೀಮಿತವಲ್ಲ. ಇದರಲ್ಲಿ ಇನ್ನೂ ಅನೇಕ ಅಂಶಗಳು ಇವೆ. ಅವುಗಳ ಝಲಕ್ ತೋರಿಸುವ ರೀತಿಯಲ್ಲಿ ಟ್ರೇಲರ್ ಮೂಡಿಬಂದಿದೆ. ಈ ಸಿನಿಮಾದಲ್ಲಿ ಗೌರಿಶಂಕರ್ ಹೀರೋ ಆಗಿ ನಟಿಸಿದ್ದಾರೆ. ರಾಜ್ ಗುರು ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಬಿಂಧು ಶಿವರಾಮ್ ನಟಿಸಿದ್ದಾರೆ. ಮಾರ್ಚ್ 15ಕ್ಕೆ ‘ಕೆರೆಬೇಟೆ’ ಬಿಡುಗಡೆ ಆಗಲಿದೆ.
ಗೌರಿಶಂಕರ್ ಅವರಿಗೆ ‘ಕೆರೆಬೇಟೆ’ ಸಿನಿಮಾದಲ್ಲಿ ರಗಡ್ ಆದಂತಹ ಪಾತ್ರ ಇದೆ. ಅವರು ವಿಲನಿಶ್ ಶೇಡ್ ಇರುವ ಪಾತ್ರವನ್ನು ನಿಭಾಯಿಸಿದ್ದಾರೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಸಿನಿಮಾದ ಕಥೆ ಏನು ಎಂಬುದನ್ನು ತಿಳಿಯಲು ಸಿನಿಪ್ರಿಯರಲ್ಲಿ ಕೌತುಕ ಮೂಡಿದೆ. ಟ್ರೇಲರ್ ನಲ್ಲಿ ಅಂಟಿಗೆ-ಪಿಂಟಿಗೆ ಶೈಲಿಯ ದೃಶ್ಯ ಹೈಲೈಟ್ ಆಗಿದೆ. ಅದೇ ರೀತಿಯೇ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಟ್ರೇಲರ್ ರಿಲೀಸ್ಗೂ ಮುನ್ನ ಬೆಂಗಳೂರಿನ ಹಲವು ಮನೆಗಳಿಗೆ ತೆರಳಿದ ಚಿತ್ರತಂಡದವರು ದೀಪ ಹಿಡಿದುಕೊಂಡು ಪ್ರೇಕ್ಷಕರ ಬೆಂಬಲ ಕೋರಿದ್ದಾರೆ.
ನಾಯಕ ಗೌರಿ ಶಂಕರ್ ಅವರ ಪುತ್ರಿ ಈಶ್ವರಿ ಮನ ಟ್ರೇಲರ್ ಬಿಡುಗಡೆ ಮಾಡಿದ್ದು ವಿಶೇಷ. ಸಂಪೂರ್ಣ ಮಲೆನಾಡಿನ ಪರಿಸರದಲ್ಲಿ ನಡೆಯುವ ಸಿನಿಮಾ ಕಥೆ ಇದಾಗಿದೆ. ಮೀನು ಬೇಟೆಯ ಜೊತೆಗೆ ಗ್ರಾಮೀಣ ಜನರ ಜಗಕ, ಕಿತ್ತಾಟ ಸೇರಿದಂತೆ ಹಲವು ಅಂಶಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ. ಒಟ್ಟಿನಲ್ಲಿ ಟ್ರೇಲರ್ನಿಂದಾಗಿ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾ ಗಿದೆ. ಇದರಲ್ಲಿ ಗೌರಿ ಶಂಕರ್ ಅವರ ನಟನೆಗೆ ಸಿನಿಪ್ರಿಯರು ಮೆಚ್ಚುಗೆ ಸೂಚಿಸುತ್ತಿದ್ದಾರೆ.
ನಟಿ ಬಿಂಧು ಶಿವರಾಮ್ ಅವರಿಗೆ ಇದು ಮೊದಲ ಸಿನಿಮಾ. ಮಲೆನಾಡಿನ ಹುಡುಗಿಯಾಗಿ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚೊಚ್ಚಲ ಸಿನಿಮಾದ ಬಿಡುಗಡೆಗಾಗಿ ಅವರು ಕಾದಿದ್ದಾರೆ. ನಿರ್ದೇಶಕ ರಾಜ್ಗುರು ಅವರಿಗೆ ಇದು ಮೊದಲ ಸಿನಿಮಾ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವ ಅವರು ಈಗ ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಹಲವು ಸಿನಿಮಾಗಳಿಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ರಾಜ್ಗುರು ಅವರಿಗೆ ಇದೆ. ತಮ್ಮ ಮೊದಲ ಸಿನಿಮಾದಲ್ಲಿ ಅವರು ಮಲೆನಾಡಿನ ಕಹಾನಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಗೌರಿಶಕಂಕರ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸುವುದರ ಜೊತೆಗೆ ‘ಜನಮನ ಸಿನಿಮಾಸ್’ ಬ್ಯಾನರ್ ನಲ್ಲಿ ಅವರ ಸಹೋದರ ಜೈಶಂಕರ್ ಪಟೇಲ್ ಜೊತೆ ಸೇರಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಕುಮಾರ್ ಮುಂತಾದ ಕಲಾವಿದರು ‘ಕೆರೆಬೇಟೆ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕರೆಬೇಟೆ’ ಟ್ರೇಲರ್ನಲ್ಲಿ ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆಯುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.