ಬೆಂಗಳೂರು: ಕನ್ನಡ ಕಡ್ಡಾಯ ನಾಮಫಲಕ ಅಳವಡಿಕೆಗೆ ನೀಡಿದ್ದ ಡೆಡ್ ಲೈನ್ ಮುಗಿಯುತ್ತ ಬಂದ್ರೂ ಬೆಂಗಳೂರಿನ ಅಂಗಡಿ-ಮುಂಗಟ್ಟುಗಳ ನಾಮಫಲಕ ಬದಲಾಗದಿರೋದು ಕನ್ನಡ ಹೋರಾಟಗಾರರನ್ನ ಕೆರಳಿಸಿದೆ. ಡೆಡ್ ಲೈನ್ ಮುಗಿಯೋಕೆ ಎರಡೇ ದಿನ ಬಾಕಿ ಇದ್ದು, ನಾಮಫಲಕ ಕಡ್ಡಾಯವಾಗದಿದ್ರೆ ಕರ್ನಾಟಕ ಬಂದ್ ಮಾಡೋದಾಗಿ ಕನ್ನಡದ ಕಟ್ಟಾಳು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಫೆಬ್ರವರಿ 28 ರೊಳಗೆ ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಿತ್ತು. ಆದರೆ ಡೆಡ್ ಲೈನ್ ಮುಗೀತಾ ಬಂದ್ರೂ ಒಂದಷ್ಟು ರಸ್ತೆಗಳ ಅಂಗಡಿ ಮುಂಗಟ್ಟುಗಳ ನಾಮಫಲಕ ಬದಲಾಗಿಲ್ಲ.
ಸದ್ಯ ಬೆಂಗಳೂರಿನ ಪ್ರಮುಖ ರಸ್ತೆಗಳಾದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯ ಕೆಲ ಅಂಗಡಿಗಳು ಇನ್ನೂ ನಾಮಫಲಕ ಬದಲಾಯಿಸಿಲ್ಲ. ಅತ್ತ ಅಧಿವೇಶನದಲ್ಲೂ ಕನ್ನಡ ನಾಮಫಲಕ ಪ್ರತಿಧ್ವನಿಸಿದ್ರೂ ಸರ್ಕಾರ ಕೂಡ ಸೈಲೆಂಟ್ ಆಗಿರೋದಕ್ಕೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಫೆಬ್ರವರಿ 28 ರೊಳಗೆ ಕಡ್ಡಾಯ ಕನ್ನಡ ನಾಮಫಲಕ ಹಾಕದಿದ್ರೆ ಕರ್ನಾಟಕ ಬಂದ್ ಮಾಡೋ ಎಚ್ಚರಿಕೆ ನೀಡಿದ್ದಾರೆ.
ಇನ್ನು ಮತ್ತೊಂದೆಡೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರು ಈ ಬಗ್ಗೆ ಮಾತನಾಡಿದ್ದು, ಫೆ.28ರ ಒಳಗೆ ಕನ್ನಡಮಯವಾಗುತ್ತದೆ ಅಂತಾ ಸರಕಾರ ಹೇಳಿ ಸಮಯ ತೆಗೆದುಕೊಂಡಿದೆ. ಸರಕಾರ ಮಾತು ತಪ್ಪಿದರೆ 32 ಜಿಲ್ಲೆಯವರು ಗುಡುಗಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.