ಬೆಂಗಳೂರು: ಬಿಜೆಪಿ ಅಭ್ಯರ್ಥಿ ನಾರಾಯಣ ಭಾಂಡಗೆ ಮತ್ತು ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುವ ವಿಶ್ವಾಸವಿದೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎನ್ ಡಿಎ ಅಭ್ಯರ್ಥಿ ಗೆಲ್ಲಿಸುವ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎಲ್ಲ ಶಾಸಕರೊಂದಿಗೆ ಮಾತನಾಡಿದ್ದಾರೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಬಿಜೆಪಿ ಶಾಸಕ, ಚುನಾವಣಾ ಏಜೆಂಟ್ ಟಿ.ಸುನೀಲ್ ಕುಮಾರ್ ಮಾತನಾಡಿ, ರಾಜ್ಯಸಭಾ ಚುನಾವಣೆಯಲ್ಲಿ ಅಧಿಕೃತ ಅಭ್ಯರ್ಥಿ ನಾರಾಯಣ ಭಾಂಡಗೆ ಅವರಿಗೆ ನಮ್ಮ ಶಾಸಕರು ಮತ ಚಲಾಯಿಸುತ್ತಾರೆ ಎಂದು ತಿಳಿಸಿದರು.
ಹೆಚ್ಚುವರಿ ಮತಗಳನ್ನು ಎನ್ಡಿಎ ಅಭ್ಯರ್ಥಿಗೆ ವರ್ಗಾಯಿಸಲಾಗುತ್ತದೆ. ಬಿಜೆಪಿ ಎಲ್ಲ ಶಾಸಕರು ಮಧ್ಯಾಹ್ನ 12 ಗಂಟೆ ಒಳಗೆ ಪೂರ್ಣವಾಗಿ ಮತದಾನದಲ್ಲಿ ಪಾಲ್ಗೊಳ್ಳುತ್ತಾರೆ. ನಮಗೆ 45 ಮತಗಳು ಗೆಲ್ಲಲು ಬೇಕಾಗುತ್ತದೆ. ಬಿಜೆಪಿಯಿಂದ ಯಾವುದೇ ಅಡ್ಡ ಮತದಾನ ಆಗುವುದಿಲ್ಲ ಎಂದರು.
ಎನ್ಡಿಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮಾತನಾಡಿ, ದುಡ್ಡು ಕೊಟ್ಟು ಕೊಂಡುಕೊಳ್ಳುವ ಮತಗಳನ್ನು ಕೇಳಿಲ್ಲ. ವಿಶ್ವಾಸದ ಮತಗಳನ್ನು ಕೇಳಿದ್ದೇನೆ. ಆ ಪಕ್ಷ ಈ ಪಕ್ಷ ಅಂತ ಕೇಳಿಲ್ಲ. ಎಲ್ಲ ಪಕ್ಷದವರನ್ನು ಮತ ಕೇಳಿದ್ದೇನೆ. ವಿಶ್ವಾಸದ ಮತಗಳಲ್ಲಿ ನನಗೆ ನಂಬಿಕೆ ಇದೆ. ಕಾಂಗ್ರೆಸ್ನವರು ಹೊಸ ಸಿಸ್ಟಮ್ ಅನ್ನು ತಂದಿದ್ದಾರೆ. ಬೆದರಿಕೆ ಹಾಕಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂದು ಹೇಳಿದರು.
ಬೆಳಗ್ಗೆ 9 ಗಂಟೆಯಿಂದ ರಾಜ್ಯಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.