ಮನೆ ಅಪರಾಧ ಹನೂರು: ಚಿರತೆ ದಾಳಿಗೆ 4 ಕುರಿಗಳು ಬಲಿ

ಹನೂರು: ಚಿರತೆ ದಾಳಿಗೆ 4 ಕುರಿಗಳು ಬಲಿ

0
ಸಾಂದರ್ಭಿಕ ಚಿತ್ರ

ಹನೂರು (ಚಾಮರಾಜನಗರ): ಚಿರತೆ ದಾಳಿಗೆ 4 ಕುರಿಗಳು ಬಲಿಯಾಗಿರುವ ಘಟನೆ ಸೋಮವಾರ ತಡರಾತ್ರಿ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಈ ಕುರಿಗಳು ಗ್ರಾಮದ ಪಾಸ್ಕ ಮೇರಿ ಎಂಬುವರಿಗೆ ಸೇರಿವೆ.

ಪಾಸ್ಕ ಮೇರಿ ಎಂಬ ರೈತ ಮಹಿಳೆ ಜೀವನಕ್ಕಾಗಿ 4 ಕುರಿಗಳನ್ನು ಸಾಕುತ್ತಿದ್ದರು. ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಸೋಮವಾರ ತಡರಾತ್ರಿ ಚಿರತೆ ದಾಳಿ ನಡೆಸಿ 4 ಕುರಿಗಳನ್ನು ಬಲಿ ಪಡೆದುಕೊಂಡಿದೆ.

ಇದರಿಂದ ಸಾವಿರಾರು ರೂ. ನಷ್ಟವಾಗಿದ್ದು, ರೈತನಿಗೆ ತುಂಬಲಾರದ ನಷ್ಟ ಉಂಟಾಗಿದ್ದು, ಪರಿಹಾರ ನೀಡಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.

ಈ ಭಾಗದಲ್ಲಿ ಇದು ಎರಡನೇ ಬಾರಿ ದಾಳಿಯಾಗಿದ್ದು, ಜನರು ಭಯಭೀತರಾಗಿದ್ದಾರೆ ಇದರಿಂದ ಆದಷ್ಟು ಬೇಗ ಚಿರತೆ ಸೆರೆಗೆ ಆಗ್ರಹಿಸಿದ್ದಾರೆ.