ಶಿವಮೊಗ್ಗ: ಕೆಲಸಕ್ಕೆಂದು ಹೊರಟಿದ್ದ ಮಹಿಳೆಗೆ ಅಪರಿಚಿತರಿಬ್ಬರು ಬೈಕ್ ನಲ್ಲಿ ಬಂದು ಚಾಕುವಿನಿಂದ ಇರಿದಿರುವ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.
ಹೊಸನಗರ ನಿವಾಸಿ ನಾಜೀಮಾ (38) ಗಾಯಗೊಂಡ ಮಹಿಳೆ.
ನಾಜೀಮಾ ಹೊಸನಗರದ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದು, ಬುಧವಾರ ಮಧ್ಯಾಹ್ನ ಮನೆಗೆ ಬಂದು ಊಟ ಮುಗಿಸಿ ಹೊಸನಗರದ ಗಣಪತಿ ದೇವಾಲಯದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಾಜೀಮಾ ಅವರ ಬಲ ಕೈ ತೋಳಿಗೆ ಚಾಕುವಿನಿಂದ ಇರಿದಿದ್ದಾರೆ.
ಬೈಕ್ ಚಲಾಯಿಸುತ್ತಿದ್ದವನು ಹೆಲ್ಮೆಟ್ ಹಾಕಿಕೊಂಡಿದ್ದು, ಹಿಂಬದಿ ಸವಾರ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದನು. ಇದರಿಂದ ಅವರ ಮುಖ ಕಂಡು ಬಂದಿಲ್ಲ. ನಾಜೀಮಾ ಜೋರಾಗಿ ಕೂಗಿಕೊಂಡ ಕಾರಣ ಸ್ಥಳೀಯರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳುವಿಗೆ ನಾಲ್ವರು ಮಕ್ಕಳಿದ್ದು, ಘಟನೆಯ ಸಂದರ್ಭ ಬುರ್ಕಾ ಹಾಕಿಕೊಂಡಿದ್ದ ಕಾರಣಕ್ಕೆ ಹೆಚ್ಚಿನ ಗಾಯಗಳಾಗಿಲ್ಲ. ಚಾಕುವಿನಿಂದ ಇರಿದವರು ಯಾರು, ಯಾವ ಕಾರಣಕ್ಕೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಸಿಕ್ಕಿಲ್ಲ.
ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ನಡೆಯುತ್ತಿದೆ.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.