ಮೈಸೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ನಂಜುಮಳಿಗೆಯಲ್ಲಿರುವ ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯ ಕಾಲೇಜಿನ ಸೆಂಟರ್ ನಲ್ಲಿ ಪರೀಕ್ಷೆ ಎದುರಿಸುತ್ತಿರುವ ವಿಧ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಕೃಷ್ಣರಾಜ ಯುವ ಬಳಗದ ಸದಸ್ಯರು ಶುಭ ಕೋರಿದರು.
ವಿಧ್ಯಾರ್ಥಿಗಳಿಗೆ ಗುಡ್ ಲಕ್ ಹೇಳಿ, ಮೈಸೂರಿಗೆ ಉನ್ನತ ಫಲಿತಾಂಶ ಬರಲೆಂದು ಹಾರೈಸಿದರು. ನಿಮ್ಮೊಂದಿಗೆ ನಾವಿದ್ದೇವೆಂದು ವಿಧ್ಯಾರ್ಥಿಗಳಿಗೆ ಅಭಯ ನೀಡಿದರು.
ನಂತರ ಮಾತನಾಡಿದ ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಮಾತನಾಡಿ, ಪರೀಕ್ಷೆ ಸಂಭ್ರಮದಿಂದ ಬರೆಯಿರಿ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಂಭ್ರಮದಿಂದ ಬರೆದರೆ ನಿರೀಕ್ಷೆಗಿಂತಲೂ ಹೆಚ್ಚಿನ ಅಂಕಗಳನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆ ಶತ್ರು ಎಂದು ಪರಿಗಣಿಸಿದರೆ ವರ್ಷವಿಡೀ ಕಲಿತ ಪಾಠಗಳೆಲ್ಲ ಮರೆತು ಹೋಗುತ್ತವೆ. ಯಾವುದೇ ಕಾರಣಕ್ಕೂ ಪರೀಕ್ಷೆ ಭೂತ ಎಂದುಕೊಳ್ಳಬೇಡಿ. ಹಬ್ಬದ ರೀತಿಯಲ್ಲಿ ಸಂಭ್ರಮಿಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಪೋಷಕರು ತುಂಬಬೇಕು ಎಂದರು.
ಸಂಕುಚಿತ ಮನೋಭಾವದಿಂದ ಸುಮ್ಮನೆ ಕುಳಿತರೆ ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ ದೊಡ್ಡ ದೊಡ್ಡ ಸಂಶೋಧನೆಗಳು ಹುಟ್ಟಿಕೊಂಡಿದ್ದೇ ಪ್ರಶ್ನೆಗಳಿಂದ ಎನ್ನುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಪರೀಕ್ಷೆ ಒಂದು ಸಂಭ್ರಮ ಎನ್ನುವುದರ ಜೊತೆಗೆ ಆಂತರಿಕವಾಗಿ ನೀವು ಮೊದಲು ಪ್ರಶ್ನೆ ಮಾಡಿಕೊಳ್ಳಿ. ಪರೀಕ್ಷೆ ಎಂಬ ಭಯ, ಒತ್ತಡದಿಂದ ಮೊದಲು ಹೊರ ಬನ್ನಿ. ಇಲ್ಲವಾದಲ್ಲಿ ನೀವು ಕಲಿತ ಎಲ್ಲ ಪಾಠಗಳು ಮರೆತು ಬಿಡಬಹುದು ಎಂತಹ ಕಠಿಣ ಸಂದರ್ಭದಲ್ಲಿಯೂ ನೀವು ಕೀಳರಿಮೆ ಇಟ್ಟುಕೊಳ್ಳಬಾರದು. ಪೋಷಕರು ಕೂಡ ಮಕ್ಕಳ ಮೇಲೆ ನಂಬಿಕೆ ಇಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಗೌರಿಶಂಕರ್ ನಗರದ ಶಿವಕುಮಾರ್, ತೀರ್ಥ ಕುಮಾರ, ಮಂಜುನಾಥ್, ದಯಾನಂದ್, ನವೀನ್ ಕೆಂಪಿ, ನಟರಾಜ್, ಕಂಸಾಳೆ ರವಿ ಹಾಗೂ ಇನ್ನಿತರರು ಹಾಜರಿದ್ದರು.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.