ಮೈಸೂರು: ಕುಣಿಯಲಾರದವಳು ನೆಲ ಡೊಂಕು ಎನ್ನುವಂತೆ ಎಂಬ ಸ್ಥಿತಿ ರಾಜ್ಯ ಸರಕಾರದ್ದು. ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಬೆರಳು ತೋರುತ್ತಿದೆ. ಜನರು ಸರಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯಕ್ಕೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಸಿಎಂ ಆರೋಪಿಸಿದ್ದಾರೆ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರ ಕೊಟ್ಟಿದ್ದೆಂದು ತಾಯಿ ಚಾಮುಂಡಿ ದೇವಿ ಮುಂದೆ ಪ್ರಮಾಣ ಮಾಡುತ್ತೇನೆ. ನೀವು ಬನ್ನಿ ಅದು ನಿಮ್ಮದೆ ಅಕ್ಕಿ ಎಂದು ಪ್ರಮಾಣ ಮಾಡಿ. ನೀವೇ ಪ್ರಮಾಣದ ದಿನ ನಿಗದಿ ಮಾಡಿ. ನೀವು ಕರೆದ ದಿನ ನಾನು ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ ಎಂದು ಸವಾಲೆಸೆದರು.
ಮೋದಿ ಸರಕಾರ ಕಳೆದ 10 ವರ್ಷಗಳಲ್ಲಿ ರಾಜ್ಯಕ್ಕೆ ತೆರಿಗೆ, ವಂತಿಗೆ ಮತ್ತು ಅನುದಾನದ ಹೆಸರಿನಲ್ಲಿ 4 ಲಕ್ಷ 91 ಸಾವಿರ ಕೋಟಿ ಕೊಟ್ಟಿದೆ. 10 ವರ್ಷದಲ್ಲಿ ಮನಮೋಹನ್ ಸಿಂಗ್ ಸರಕಾರ ತೆರಿಗೆ, ವಂತಿಗೆ ಮತ್ತು ಅನುದಾನದ ಹೆಸರಿನಲ್ಲಿ 1 ಲಕ್ಷ 92 ಸಾವಿರ ಕೋಟಿ ಕೊಟ್ಟಿದೆ. ಇದು ಸತ್ಯ ಎಂದು ನಮ್ಮ ಎಲ್ಲಾ ಸಂಸದರನ್ನು ಕರೆದುಕೊಂಡು ಚಾಮುಂಡಿ ಬೆಟ್ಟಕ್ಕೆ ಬಂದು ಪ್ರಮಾಣ ಮಾಡುತ್ತೇವೆ. ಸಿಎಂ ಕೂಡ ತನ್ನ ಸಚಿವ ಸಂಪುಟದ ಜೊತೆ ಬಂದು ತಾವು ಹೇಳುತ್ತಿರುವುದು ಸತ್ಯ ಎಂದು ಪ್ರಮಾಣ ಮಾಡಲಿ ಎಂದರು.
ಕಾಂಗ್ರೆಸ್ ಕೃಪಾಪೋಷಿತ ಮಂಡಳಿ ನೀಡಿರುವ ಜಾತಿ ಗಣತಿ ವರದಿಯಿದು. ಜಾತಿಗಳ ನಡುವೆ ಎತ್ತಿಕಟ್ಟಲು ಈ ವರದಿ ಸಿದ್ಧ ಮಾಡಿಸಲಾಗಿದೆ. ಹಿಂದೂ ಸಮಾಜವನ್ನು ಜಾತಿ ಜಾತಿ ಹೆಸರಿನಲ್ಲಿ ಹೊಡೆಯಲು ಈ ತಂತ್ರ. ಹಿಂದೂ ಎಂಬ ಭಾವದಲ್ಲಿ ಜನ ಮತ ಹಾಕಬಾರದು ಎಂಬ ರಾಜಕೀಯ ಸಂಚಿನ ಭಾಗವಾಗಿ ಈ ವರದಿಯಿದೆ. ಕಾಂಗ್ರೆಸ್ ನ ಟೂಲ್ ಕಿಟ್ ನ ಭಾಗವಾಗಿ ಈ ವರದಿ ಇದೆ ಎಂದು ಕಿಡಿಕಾರಿದರು.
ಪಾಕಿಸ್ತಾನ್ ಪರ ಘೋಷಣೆ ವಿಚಾರಕ್ಕೆ ಮಾತನಾಡಿ, ನನ್ನ ಮಾಹಿತಿ ಪ್ರಕಾರ ಎಫ್ಎಸ್ಎಲ್ ರಿಪೋರ್ಟ್ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದು ಸತ್ಯ ಎಂಬುದಿದೆ. ಸರಕಾರ ತಕ್ಷಣ ಈ ವರದಿ ಬಹಿರಂಗ ಪಡಿಸಬೇಕು. ನಾಲ್ವರನ್ನು ಪೊಲೀಸರು ವಿಚಾರಣೆ ಮಾಡ್ತಿದ್ದಾರೋ ಅಥವಾ ಬಿರಿಯಾನಿ ತಿನ್ನಿಸುತ್ತಿದ್ದಾರೋ? ಮುಸ್ಲಿಂರನ್ನು ಬ್ರದರ್ಸ್ ಅಂತಾ ಡಿಕೆಶಿಯೆ ಹೇಳಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಕೊಟ್ಟರೂ ಅಚ್ಚರಿ ಬೇಡ ಎಂದರು.
ಕನಕಪುರ ಟ್ಯಾಕ್ಸ್: 40% ಸರಕಾರ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಬೆಂಗಳೂರಿನಲ್ಲಿ ಕನಕಪುರ ಟ್ಯಾಕ್ಸ್ ಕೊಡದೆ ಯಾವ ಫೈಲ್ ಪಾಸ್ ಆಗುತ್ತಿಲ್ಲ. ವರ್ಗಾವಣೆಗೆ ವೈಎಸ್ ಟಿ ಫಿಕ್ಸ್ ಆಗಿದೆ. ಕಲೆಕ್ಷನ್ ಟಾಸ್ಕ್ ಅನ್ನು ತಮ್ಮ ಬೆಂಬಲಿಗರಿಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಟಿಕೆಟ್ ವಿಚಾರದಲ್ಲಿ ಶೋಭಾ ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೆಯುತ್ತಿದೆ ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಬಾಸ್ ಇಸ್ ಆಲ್ವೇಸ್ ರೈಟ್. ಬಾಸ್ ವಿರುದ್ದ ಯಾವಾತ್ತಾದರೂ ಮಾತಾಡಲು ಯಾರಿಗಾದರೂ ಸಾಧ್ಯವೇ? ನಾನು ಯಾವತ್ತೂ ಕ್ಷೇತ್ರದ ಆಕಾಂಕ್ಷಿ ಎಂದು ಹೇಳಿಲ್ಲ. ಹೀಗಾಗಿ ಅಲ್ಲಿ ನಡೆಯುತ್ತಿರುವ ವಿದ್ಯಮಾನ ನನಗೆ ಸಂಬಂಧಿದ್ದೆಂದು ಹೇಗೆ ಹೇಳುತ್ತೀರಾ ಎಂದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.