ಮೈಸೂರು: ಹೋಂ ಪ್ರಾಡಕ್ಟ್ ಹಾಗೂ ಟ್ರಸ್ಟ್ ಹೆಸರಿನಲ್ಲಿ ಚಿನ್ನ, ಸೀರೆ, ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ನಜರಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಇಟ್ಟಿಗೆಗೂಡಿನ ನಿವಾಸಿ ಸಂಜಯ್ ಅಲಿಯಾಸ್ ಬದ್ರಿ(34) ಬಂಧಿತ ಆರೋಪಿ.
ಸತ್ಯಂ ಹೋಂ ಪ್ರಾಡಕ್ಟ್ ಹಾಗೂ ಪ್ರತಿಷ್ಟಾಪನಾ ಚಾರಿಟಬಲ್ ಟ್ರಸ್ಟ್ ಹೆಸರಿನಲ್ಲಿ ಕಡಿಮೆ ಹಣಕ್ಕೆ ಚಿನ್ನ, ಸೀರೆ, ಟಿವಿ, ದಿನಸಿ ಆಹಾರ ಪದಾರ್ಥಗಳನ್ನು ಕೊಡುತ್ತೇನೆಂದು ಹಲವರಿಂದ ಸುಮಾರು 30.33 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನಲೆ ನಜರ್ ಬಾದ್ ಠಾಣಾ ಪೊಲೀಸರು ಆರೋಪಿ ಸಂಜಯ್ ನನ್ನು ಬಂಧಿಸಿ, ನ್ಯಾಯಾಲಯದ ಅನುಮತಿ ಮೇರೆಗೆ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಆರಂಭದಲ್ಲಿ ವಂಚನೆಗೊಳಗಾದ ಒಬ್ಬರು ದೂರು ದಾಖಲಿಸಿದ್ದರು. ಆರೋಪಿಯ ಬಂಧನವಾದ ಬಳಿಕ ಹಲವರು ಸಂಜಯ್ ನಿಂದ ತಮಗೆ ವಂಚನೆಯಾಗಿದೆ ಎಂದು ಕರೆ ಮಾಡಿ ಮಾಹಿತಿ ಪಡೆದ ನಂತರ ಠಾಣೆಗೆ ಬಂದು ಹೇಳಿಕೆ ನೀಡುತ್ತಿದ್ದಾರೆ.
ಇದುವರೆಗೂ ಸುಮಾರು 30.33 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ್ದಾನೆ ಎಂಬ ಮಾಹಿತಿ ಇದೆ. ಆತನಿಂದ ವಂಚನೆಗೊಳದವರ ಸಂಖ್ಯೆ ಇನ್ನಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.