ಮನೆ ಸ್ಥಳೀಯ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಅಯೂಬ್‌ ಖಾನ್‌ ಅಧಿಕಾರ ಸ್ವೀಕಾರ

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಅಯೂಬ್‌ ಖಾನ್‌ ಅಧಿಕಾರ ಸ್ವೀಕಾರ

0

ಮೈಸೂರು: ಇಲ್ಲಿನ ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ(ಕೆಇಎ)ದ ನೂತನ ಅಧ್ಯಕ್ಷರಾಗಿ ಮಾಜಿ ಮೇಯರ್‌ ಅಯೂಬ್‌ ಖಾನ್‌ ಶನಿವಾರ ಅಧಿಕಾರ ಸ್ವೀಕರಿಸಿದರು.

ಅವರನ್ನು ಶಾಸಕರಾದ ತನ್ವೀರ್‌ ಸೇಠ್ ಹಾಗೂ ಕೆ.ಹರೀಶ್‌ಗೌಡ ಅಭಿನಂದಿಸಿದರು. ವಿಧಾನಪರಿಷತ್‌ ಸದಸ್ಯ ಜೆಡಿಎಸ್‌ನ ಸಿ.ಎನ್. ಮಂಜೇಗೌಡ ಕೂಡ ಪಾಲ್ಗೊಂಡು ಅಭಿನಂದಿಸಿದ್ದು ಅಚ್ಚರಿಗೆ ಕಾರಣವಾಯಿತು.

ಪ್ರಾಧಿಕಾರದ ಸಿಇಒ ರಾಜೇಶ್‌ ಗೌಡ, ನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಆರ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮಾಜಿ ಮೇಯರ್ ಆರೀಫ್ ಹುಸೇನ್‌, ಮುಖಂಡರಾದ ಬಿ.ಎಂ. ರಾಮು, ಎನ್.ಆರ್. ನಾಗೇಶ್, ಯೋಗೇಶ್ ಉಪ್ಪಾರ್, ಗೋಪಿ ಪಾಲ್ಗೊಂಡಿದ್ದರು.

ಅಯೂಬ್ ಅವರನ್ನು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್‌ರಾಂ ಅವರ ಮೊಮ್ಮಗ ಹಾಗೂ ಎಐಸಿಸಿ ವಕ್ತಾರ ಅನ್ಸುಲ್ ಅವಿಜಿತ್ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ.ವಿಜಯ್‌ಕುಮಾರ್ ಅಭಿನಂದಿಸಿದರು.

ಸರ್ಕಾರದಿಂದ ಗುರುವಾರ ಪ್ರಕಟವಾಗಿದ್ದ ಮೊದಲ ಪಟ್ಟಿಯಲ್ಲಿ ಅಯೂಬ್‌ ಅವರಿಗೆ ‘ಮೈಲ್ಯಾಕ್‌’ (ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ) ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೋರಿಕೊಂಡು ಕೆಲವೇ ಗಂಟೆಗಳಲ್ಲಿ ಆದೇಶ ಬದಲಾವಣೆ ಮಾಡಿಸಿಕೊಂಡು, ಕೆಇಎ ಅಧ್ಯಕ್ಷ ಗಾದಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.