ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಇನ್ನೆರಡು ದಿನಗಳಲ್ಲಿ ಹಾಲಿ ಸಂಸದರು ಸೇರಿದಂತೆ ಅಭ್ಯರ್ಥಿಗಳ ಹೆಸರುಗಳನ್ನು ರಾಜ್ಯ ಘಟಕದಿಂದ ಹೈಕಮಾಂಡ್ ಗೆ ಕಳುಹಿಸಿಕೊಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಭಾನುವಾರ ಕೋರ್ ಕಮಿಟಿ ಸಭೆ ನಡೆಯಿತು. ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಕೆಲ ಕ್ಷೇತ್ರಗಳಲ್ಲಿ ಹಾಲಿಗಳು ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಹೊಸಬರ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಪ್ರತಿ ಕ್ಷೇತ್ರದ ಆಕಾಂಕ್ಷಿಗಳು, ಅವರ ಸಾಮರ್ಥ್ಯ, ಗೆಲ್ಲುವ ಸಾಮರ್ಥ್ಯದ ಕುರಿತಂತೆ ಚರ್ಚಿಸಿ, ಸ್ಥಳೀಯ ನಾಯಕರ ಅಭಿಪ್ರಾಯಗಳ ಕುರಿತು ಅವಲೋಕನ ನಡೆಸಲಾಗಿದೆ.
ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ಸೇರಿದ್ದೆವು. ಎರಡ್ಮೂರು ದಿನಗಳಿಂದ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಇಬ್ಬರು ವೀಕ್ಷಕರನ್ನು ಕಳಿಸಿದ್ದೆವು. ಅವರಿಂದ ಬಂದಿರುವ ಹೆಸರುಗಳನ್ನು ಸಭೆಯ ಮುಂದೆ ಇಟ್ಟಿದ್ದೇವೆ. ಚರ್ಚಿಸಿದ ಹೆಸರುಗಳನ್ನು ವರಿಷ್ಠರಿಗೆ ಕಳಿಸಲು ತೀರ್ಮಾನಿಸಲಾಗಿದೆ ಎಂದರು.
ರಾಜ್ಯದಲ್ಲಿ ನಮಗೆ ಉತ್ತಮ ವಾತಾವರಣ ಇದೆ. ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಬೇಕು. 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಹೊಸ ದಾಖಲೆ ನಿರ್ಮಾಣಕ್ಕೆ ತೀರ್ಮಾನವಾಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಹೆಸರುಗಳನ್ನು ಕಳಿಸುತ್ತೇವೆ. ಅಕಾಂಕ್ಷಿಗಳ ಪಟ್ಟಿಯನ್ನು ಕಳುಹಿಸುವುದು ನಮ್ಮ ಕರ್ತವ್ಯ. ಚರ್ಚೆ ಆಗಿರುವ ಎಲ್ಲ ಹೆಸರುಗಳನ್ನೂ ಕಳುಹಿಸಲಾಗುವುದು. ಅದರಲ್ಲಿ ಹಾಲಿ ಸಂಸದರ ಹೆಸರುಗಳೂ ಒಳಗೊಂಡಿವೆ, ಉಳಿದದ್ದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣಾ ಪ್ರಭಾರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ದಾಸ್ ಅಗರ್ ವಾಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.