ಮನೆ ಅಪರಾಧ ಬೈಕ್ -ಮಿನಿ ಗೂಡ್ಸ್ ವಾಹನ ಅಪಘಾತ: ಬೈಕ್ ಸವಾರ ಸಾವು

ಬೈಕ್ -ಮಿನಿ ಗೂಡ್ಸ್ ವಾಹನ ಅಪಘಾತ: ಬೈಕ್ ಸವಾರ ಸಾವು

0

ಕಡಬ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಸೋಮವಾರ ಮಾ.4 ರ ರಾತ್ರಿ ನಡೆದಿದೆ.

ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಮೃತಪಟ್ಟ ದುರ್ದೈವಿ.

ಶ್ರೀಜಿಸ್‌ ರಾಮಕುಂಜ ಶಾರದಾ ನಗರದಲ್ಲಿರುವ ಚಿಕ್ಕಮ್ಮ, ಅಂಗನವಾಡಿ ಕಾರ್ಯಕರ್ತೆಯೂ ಆಗಿರುವ ಯಮುನಾ ಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಆಲಂಕಾರು ಸಮೀಪದ ನೆಕ್ಕರೆಯಲ್ಲಿರುವ ಪೆಟ್ರೋಲ್ ಪಂಪ್‌ ನಲ್ಲಿ ಬೈಕ್‌ಗೆ ಪೆಟ್ರೋಲ್ ತುಂಬಿಸಿ ಮತ್ತೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.

ಘಟನೆಯ ಪರಿಣಾಮ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್ ರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ.

ಮೃತ ಶ್ರೀಜಿಸ್‌ ತಂದೆ ಗುರುವಪ್ಪ, ತಾಯಿ ಗಿರಿಜಾ, ಸಹೋದರರಾದ ಸುನೀಶ್ ಹಾಗೂ ಸುಜಿಸ್‌ ರನ್ನು ಅಗಲಿದ್ದಾರೆ.