ಬೆಂಗಳೂರು: ಫೆ. 7 ರಿಂದ ರಜೆ ಮೇಲೆ ತೆರಳಿರುವ ಕೆಪಿಎಸ್ ಸಿ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.
ಆಯೋಗದ ಕಾನೂನು ಕೋಶದ ಮುಖ್ಯಸ್ಥರ ನೇಮಕ ಸಂಬಂಧ ಆಯೋಗದ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿ ನಡುವೆ ಮೂರ್ನಾಲ್ಕು ತಿಂಗಳಿಂದ ತೀವ್ರ ಸಂಘರ್ಷ ನಡೆಯುತ್ತಿತ್ತು.
ಆ ಹಿನ್ನೆಲೆಯಲ್ಲಿ ಸಂಘರ್ಷವನ್ನು ತಾತ್ಕಾಲಿಕವಾಗಿ ಉಪಶಮನಗೊಳಿಸಲು ಫೆಬ್ರವರಿಯಲ್ಲಿ 10 ದಿನ ಕಡ್ಡಾಯ ರಜೆ ಮೇಲೆ ಕಳುಹಿಸಿದ್ದ ಸರ್ಕಾರ ಇದೀಗ ಅವರನ್ನು ಬೇರೆ ಹುದ್ದೆಗೆ ವರ್ಗಾವಣೆ ಮಾಡಿದೆ.
ಲತಾಕುಮಾರಿ ಅವರು ರಜೆಯಲ್ಲಿ ತೆರಳಿದ ಬಳಿಕ ಕಾರ್ಯದರ್ಶಿ ಹುದ್ದೆಯ ಹೊಣೆಯನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಕೆ. ರಾಕೇಶ್ ಕುಮಾರ್ ಅವರಿಗೆ ವಹಿಸಲಾಗಿತ್ತು. ಲತಾಕುಮಾರಿ ಅವರನ್ನು ವರ್ಗಾವಣೆ ಮಾಡಿರುವುದರಿಂದ ರಾಕೇಶ್ ಕುಮಾರ್ ಅವರಿಗೇ ಕಾರ್ಯದರ್ಶಿಯ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಲತಾಕುಮಾರಿ ಅವರು ಸೆ.13 ರಂದು ಆಯೋಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅದಕ್ಕೂ ಮುನ್ನ ಕಾರ್ಯದರ್ಶಿಯಾಗಿದ್ದ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನೂ ಸರ್ಕಾರ ಆಯೋಗದ ಅಧ್ಯಕ್ಷರು, ಸದಸ್ಯರ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಿತ್ತು. ಇದೀಗ ಮತ್ತೆ ಲತಾಕುಮಾರಿ ಅವರನ್ನು ವರ್ಗಾವಣೆ ಮಾಡಿರುವುದರಿಂದ ಆರು ತಿಂಗಳಲ್ಲಿಇಬ್ಬರು ಕಾರ್ಯದರ್ಶಿಗಳ ವರ್ಗಾವಣೆಯಾದಂತಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.