ಗದಗ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಾರ್ವಜನಿಕ ಸೇವೆಯಲ್ಲಿ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆ ನೀಡಬೇಕು ಹಾಗೂ ಕೆಲಸ ಕೇಳುವವರಾಗದೇ ನೀಡುವವರಾಗಬೇಕೆಂದು ವಿಶ್ವ ವಿದ್ಯಾಲಯದ ಕುಲಾಧಿಪತಿಗಳು ಆಗಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4 ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಹುತೇಕ ಗ್ರಾಮೀಣ ಪ್ರದೇಶದಿಂದ ಬಂದಿರುವ ಯುವ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಅವಿಸ್ಮರಣೀಯ ಹಾಗೂ ಸಂತೃಪ್ತಿ ತರುವಂತಹ ದಿನವಾಗಿದೆ. ಈ ಜ್ಞಾನ ಬಂಢಾರದಿಂದ ಜೀವನದ ಮೌಲ್ಯ , ಸಿದ್ಧಾಂತಗಳನ್ನು ತಮ್ಮೊಂದಿಗೆ ಕೊಂಡೊಯ್ಯಬೇಕು. ಸಾರ್ಥಕ ಜೀವನ ನಡೆಸುವ ಕನಸು ಮತ್ತು ಸಾಧಿಸಬೇಕೆಂದು ಕಿಚ್ಚು ಹೊತ್ತು ಇಲ್ಲಿಂದ ಹೊರಡುತ್ತಿದ್ದೀರಿ . ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದರು.
ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಘಟಿಕೋತ್ಸವವು ಮಹತ್ವದ ಹೆಜ್ಜೆಯಾಗಿದೆ. ವಿಶ್ವ ವಿದ್ಯಾಲಯದಲ್ಲಿ ಪಡೆದಿರುವ ಜ್ಞಾನ ಮತ್ತು ಕೌಶಲ್ಯವನ್ನು ಬಳಸಿಕೊಂಡು ಸಾಮಾಜಿಕ ಪರಿವರ್ತನೆ ತರುವುದು ನಿಮ್ಮೆಲ್ಲರ ಜವಾಬ್ದಾರಿ. ಗ್ರಾಮೀಣ ಪರಿವರ್ತನೆಯ ಸಂಕಲ್ಪ ಹೊತ್ತು ಸಾಗಿರುವ ತಾವುಗಳು ವಿಶ್ವ ವಿದ್ಯಾಲಯದ ರಾಯಭಾರಿಗಳಾಗುತ್ತೀರಿ ಎಂದರು.
ಇಂದಿನ ಆಧುನಿಕ ಯುವ ಜನಾಂಗದ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ಸಮಸ್ಯೆಗಳನ್ನು ಸಂಪೂರ್ಣವಾಗಿ ಪರಿಹರಿಸಲು ಅವರು ಸಿಂಹಗಳಂತೆ ಶ್ರಮಿಸುತ್ತಾರೆ ಎಂದು ಅಭಿಮಾನದಿಂದ ಹೇಳಿದ ಅವರು ಕಲೆಗೆ ವಿಜ್ಞಾನ ಅಳವಡಿಸುವುದೇ ತಂತ್ರಜ್ಞಾನ ಎಂದು ಸರಳ ಭಾಷೆಯಲ್ಲಿ ಹೇಳಬಹುದು. ದೇಶದ ಆರ್ಥಿಕ ಪ್ರಗತಿಯಲ್ಲಿ ತಂತ್ರಜ್ಞಾನದ ಪಾತ್ರ ಪ್ರಮುಖವಾಗಿದೆ ಎಂದರು.
ವಿಶ್ವವಿದ್ಯಾಲಯವು ಪಠ್ಯಕ್ರಮದಲ್ಲಿ ಶಿಕ್ಷಣ, ಸಂಶೋಧನೆ, ತರಬೇತಿ ಹಾಗೂ ವಿಸ್ತರಣಾ ಚಟುವಟಿಕೆಗಳನ್ನು ಅಳವಡಿಸಿಕೊಂಡಿದ್ದು ಪಾರಂಪರಿಕ ಜ್ಞಾನ, ಆಧುನಿಕ ತಂತ್ರಜ್ಞಾನ, ಮಿಶ್ರಿತ ಬೋಧನಾ ಕಲಿಕಾ ಕ್ರಮಗಳನ್ನು ಅನುಸರಿಸುತ್ತಿದೆ. ವಿಶ್ವ ವಿದ್ಯಾಲಯದ ಸ್ಥಾಪನೆಗೆ ಪ್ರೋತ್ಸಾಹ ಹಾಗೂ ಶ್ರಮಿಸಿದ ನಾಡಿನ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಗದಗ ಜಿಲ್ಲೆಯ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಗೌತಮ ಬುದ್ಧರ ಹಿತವಚನದಂತೆ ನೀನು ಇನ್ನೊಬ್ಬರ ದಾರಿಗೆ ಬೆಳಕು ನೀಡುವ ದೀಪ ಹಚ್ಚಿದರೆ ಅದು ನಿನ್ನ ದಾರಿಗೂ ಬೆಳಕು ಚೆಲ್ಲುತ್ತದೆ ಎಂದು ತಮ್ಮ ಮಾತುಗಳಿಗೆ ವಿ.ವಿ.ಯ ಸಹ ಕುಲಾಧಿಪತಿ ಪ್ರಿಯಾಂಕ್ ಖರ್ಗೆ ಅವರು ವಿರಾಮ ನೀಡಿದರು.
ಕೇಂದ್ರ ಸರ್ಕಾರ ಪಂಚಾಯತಿರಾಜ್ ಮಂತ್ರಾಲಯದ ಮಾಜಿ ಜಂಟಿ ಕಾರ್ಯದರ್ಶಿಗಳಾದ ಡಾ.ಟಿ.ಆರ್.ರಘುನಂದನ್ ಅವರು ಘಟಿಕೋತ್ಸವದ ಭಾಷಣ ಮಾಡುತ್ತಾ ಕೃಷಿ ವಲಯವು ಕುಂಠಿತವಾಗಿರುವ ಇಂದಿನ ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಯಲ್ಲಿ ಗ್ರಾಮೀಣ ಆರ್ಥಿಕತೆ ವಿಶೇಷವಾಗಿ, ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ. ಪ್ರಜಾಸತ್ತಾತ್ಮಕ ವಿಕೇಂದ್ರೀಕರಣದ ಅರ್ಥಪೂರ್ಣ ಮತ್ತು ಭಾರತ ಪರಿಣಾಮಕಾರಿ ವ್ಯವಸ್ಥೆಯ ಅನುಪಸ್ಥಿತಿಯಲ್ಲಿ ಅರ್ಥಪೂರ್ಣ ಗ್ರಾಮೀಣ ಅಥವಾ ನಗರ ಅಭಿವೃದ್ಧಿಯನ್ನು ಸಾಧಿಸಲಾಗುವುದಿಲ್ಲ ಎಂದರು.
ಡಾ. ಭೀಮರಾವ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಪಂಚಾಯತ್ ವ್ಯವಸ್ಥೆಯ ವಿಕೇಂದ್ರೀಕರಣದ ಪರವಾಗಿದ್ದರು. ಆದರೆ ಸ್ಥಳೀಯ ಸರ್ಕಾರಗಳು ಎಲ್ಲ ಸಾಮಾಜಿಕ ವರ್ಗಗಳನ್ನು ಒಳಗೊಂಡಿರಬೇಕು ಎಂದು ಬಯಸಿದ್ದರು.
ಎಪ್ಪತ್ತಮೂರನೇ ಮತ್ತು ಎಪ್ಪತ್ತನಾಲ್ಕನೆಯ ಸಂವಿಧಾನಿಕ ತಿದ್ದುಪಡಿಗಳ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ಥಳೀಯ ಸರಕಾರಗಳಿಗೆ ಸಂವಿಧಾನಿಕ ಸ್ಥಾನಮಾನ ನೀಡಿ ಮೂವತ್ತು ವರ್ಷಗಳಾಗಿದ್ದರೂ, ಪಂಚಾಯತ್ ರಾಜ್ನ ಅನುಷ್ಠಾನವು ಎಲ್ಲಾ ರಾಜ್ಯಗಳಲ್ಲಿ ಅರೆಮನಸ್ಸಿನಿಂದ ಅನುಷ್ಠಾನ ಆಗಿರುವುದು ಕಂಡು ಬಂದಿದೆ ಎಂದು ಹೇಳಿದರು.
ನಾವೆಲ್ಲ ವಿವಿಧ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಪ್ರಾದೇಶಿಕ ಮತ್ತು ಭಾಷಾ ಹಿನ್ನೆಲೆಯಿಂದ ಬಂದವರು. ವಿಭಜನೆಯನ್ನು ಉತ್ತೇಜಿಸಲು ಅಥವಾ ಏಕತೆಯನ್ನು ಉತ್ತೇಜಿಸಲು ನಾವು ಇವುಗಳನ್ನು ಬಳಸಬಹುದು. ನಿಮ್ಮ ವೈವಿಧ್ಯತೆಯು ಏಕತೆ, ಸಹಾನುಭೂತಿ ಮತ್ತು ದೇಶಭಕ್ತಿಗೆ ಅಡ್ಡಿ ಬಾರದಂತೆ ಖಚಿತಪಡಿಸಿಕೊಳ್ಳಲು ಸರಳವಾದ ಮಾರ್ಗವಿದೆ ಎಂದರು.
ಸಂವಿಧಾನವು ಸುಮಾರು 400 ವಿಧಿಗಳನ್ನು ಹೊಂದಿರುವ ಸುದೀರ್ಘ ದಾಖಲೆಯಾಗಿದೆ. ಅದೆಲ್ಲವನ್ನು ನೆನಪಿಟ್ಟುಕೊಳ್ಳುವ ಅಗತ್ಯವಿಲ್ಲ. ಏಕೆಂದರೆ ಇಡೀ ಸಂವಿಧಾನವನ್ನು 5 ಗಾಂಧೀ ತತ್ವಗಲಲ್ಲಿ ಸಂಕ್ಷಿಪ್ತಗೊಳಿಸಬಹುದು. ಅವುಗಳೆಂದರೆ ಸತ್ಯ, ಅಹಿಂಸೆ, ಸ್ವರಾಜ್, ಸರ್ವೋದಯ ಮತ್ತು ಅಂತ್ಯೋದಯ. ಈ ತತ್ವಗಳನು ಅನುಸರಿಸಲು ನಿಮಗೆ ಎರಡು ಪ್ರಮುಖ ಗುಣಲಕ್ಷಣಗಳು ಅಗತ್ಯವಾಗಿವೆ. ಅವುಗಳೆಂದರೆ ಧೈರ್ಯ ಮತ್ತು ತಾಳ್ಮೆ ಎಂದು ನೆರೆದ ವಿದ್ಯಾರ್ಥಿಗಳಿಗೆ ತಿಳಿಸಿದರು.
ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ , ಕುಲಪತಿ ಪ್ರೊ. ವಿಷ್ಣುಕಾಂತ ಚಟಪಲ್ಲಿ, ಕುಲಸಚಿವರಾದ ಡಾ. ಸುರೇಶ ನಾಡಗೌಡ್ರ, ಉಪಸ್ಥಿತರಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.