ಮೈಸೂರು: ಕರ್ನಾಟಕ ಲೋಕಾಯುಕ್ತದ ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ್ ಠಾಕೂರ್, ಪೊಲೀಸ್ ಮಹಾ ನಿರೀಕ್ಷಕರಾದ ಸುಬ್ರಮಣ್ಯೇಶ್ವರ ರಾವ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧೀಕ್ಷಕರಾದ ವಿ.ಜೆ ಸಜೀತ್ ರವರ ನೇತೃತ್ವದಲ್ಲಿ ಮಾ.06 ರಂದು 7 ಗಂಟೆಗೆ ನಗರದ ಕಸ ಬೀಸಾಡುವ ಸ್ಥಳಗಳಿಗೆ, ಕಸ ವಿಂಗಡಣೆ ಸ್ಥಳಗಳಿಗೆ, ಕಸ ಸಂಗ್ರಹಿಸಿ ವಿಲೇವಾರಿ ಮಾಡುವ ಸ್ಥಳಗಳಿಗೆ ,ಕಸ ತ್ಯಾಜ್ಯ ವಿಲೇವಾರಿ ಘಟಕಗಳಿಗೆ, ಪೌರ ಕಾರ್ಮಿಕರುಗಳ ಕರ್ತವ್ಯಗಳ ಬಗ್ಗೆ, ಕಸ ಸಂಗ್ರಹಿಸುವ ವಾಹನಗಳ ಬಗ್ಗೆ, ಕಸ ಸಂಗ್ರಹಿಸಲು ವಾಹನಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಿರುವ ಬಗ್ಗೆ ಹಾಗೂ ನಗರ ಪಾಲಿಕೆ ವಲಯ ಕಛೇರಿಗಳಿಗೆ, ಖುದ್ದು ಭೇಟಿ ಮಾಡಿ ಪರಿಶೀಲನೆ ನಡೆಸಿದರು.
ಮೈಸೂರು ವಿಭಾಗದ ಪೊಲೀಸ್ ಅಧೀಕ್ಷಕರಾದ ವಿ.ಜೆ ಸಜೀತ್ ಅವರು ಮಾತನಾಡಿ, ಪರಿಶೀಲನಾ ವೇಳೆ ಕಂಡುಬಂದ ಅಂಶಗಳ ಬಗ್ಗೆ ವಿಸ್ತ್ರತ ವರದಿಯನ್ನು ತಯಾರಿಸಿ ಲೋಕಾಯುಕ್ತರವರಿಗೆ ಸಲ್ಲಿಸಿಕೊಂಡಿದ್ದು, ಅವರ ಸೂಚನೆಯಂತೆ ಮುಂದಿನ ಕ್ರಮವನ್ನು ನಂತರದಲ್ಲಿ ಕೈಗೊಳ್ಳಲಾಗುವುದು ಎಂದರು.
ಕಾರ್ಯಾಚರಣೆಯಲ್ಲಿ ಡಿ.ವೈ.ಎಸ್.ಪಿ ರವರುಗಳಾದ ಕೃಷ್ಣಯ್ಯ, ಮಾಲತೀಶ್, ಹಾಗೂ ಪೊಲೀಸ್ ನಿರೀಕ್ಷಕರುಗಳಾದ ಉಮೇಶ್, ಜಯರತ್ನ, ರೂಪಶ್ರೀ, ರವಿಕುಮಾರ್ ಹಾಗೂ ಮೈಸೂರು, ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಯವರುಗಳು ಪಾಲ್ಗೊಂಡಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.