ಮನೆ Breaking News ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಆರೋಪಿಯ ʻರೇಖಾಚಿತ್ರʼ ಬಿಡುಗಡೆ ಮಾಡಿದ ಎನ್ ಐಎ

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಆರೋಪಿಯ ʻರೇಖಾಚಿತ್ರʼ ಬಿಡುಗಡೆ ಮಾಡಿದ ಎನ್ ಐಎ

0

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್‌ ಐಎ ಇದೀಗ ಬಾಂಬ್‌ ಸ್ಪೋಟದ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ.

ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ ಐಎ ಇದೀಗ ಬಾಂಬರ್‌ ನ ಫೋಟೋ ಸ್ಕೆಚ್‌ ಬಿಡುಗಡೆ ಮಾಡಿದೆ.

ಈ ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆಯಷ್ಟೇ ಬಾಂಬರ್​ ಫೋಟೋ ಬಿಡುಗಡೆ ಮಾಡಿತ್ತು. ಇಂದು ಬಾಂಬರ್‌ ನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ.