ಮನೆ ರಾಜ್ಯ ನಾಲವಾರ: ರಸ್ತೆ ಅಪಘಾತದಲ್ಲಿ ಮಡಿದ ಆರು ಮಂದಿಯ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಣೆ

ನಾಲವಾರ: ರಸ್ತೆ ಅಪಘಾತದಲ್ಲಿ ಮಡಿದ ಆರು ಮಂದಿಯ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಣೆ

0

ನಾಲವಾರ: ಕಳೆದ ನವೆಂಬರ್ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು.

ನಾಲವಾರದ ಅವರ ಮನೆಗೆ ಭೇಟಿ ನೀಡಿದ ಸಚಿವರು, ಆರು ಜನರ ವಾರಸುದಾರರಿಗೆ ತಲಾ ರೂ 2 ಲಕ್ಷದ ಪರಿಹಾರದ ಚೆಕ್ ನ್ನು ವಿತರಿಸಿದರು.

ರಸ್ತೆ ಅಪಘಾತದಲ್ಲಿ ನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ, 20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಈ‌ ಸಂದರ್ಭದಲ್ಲಿ ಮಹೆಮೂದ್ ಸಾಹೇಬ್, ಶಿವಾನಂದ ಪಾಟೀಲ್, ವೀರನಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ತಹಸೀಲ್ದಾರ ಶಾ ವಲಿ ಸೇರಿದಂತೆ ಹಲವರಿದ್ದರು.