ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರವು ಪ್ರಕಟಣೆ ಮೂಲಕ ಈ ಮಾಹಿತಿ ನೀಡಿದೆ.
ರಾಜ್ಯ ಸರ್ಕಾರ ಅಂಗೀಕರಿಸಿದ್ದ ಮಸೂದೆಯನ್ನು ರಾಜ್ಯಪಾಲ ಗುರ್ಮೀತ್ ಸಿಂಗ್ ಅವರು ಫೆಬ್ರುವರಿ 29ರಂದು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ, ಸ್ವಾತಂತ್ರ್ಯಾನಂತರ ಯುಸಿಸಿ ಕಾಯ್ದೆ ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಿದೆ.
ಸಿಎಂ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸರ್ಕಾರವು ಫೆಬ್ರುವರಿ 6ರಂದು ವಿಶೇಷ ಅಧಿವೇಶನದ ಸಂದರ್ಭ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತ್ತು. ಮಸೂದೆ ಅಂಗೀಕಾರವು ಉತ್ತರಾಖಂಡ ರಾಜ್ಯದಲ್ಲಿ ಇತಿಹಾಸವಾಗಲಿದೆ ಎಂದು ಧಾಮಿ ಹೇಳಿದ್ದರು. ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗಿತ್ತು.
2022ರ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಯನ್ನು ಈ ಕಾಯ್ದೆ ಪೂರ್ಣಗೊಳಿಸಲಿದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಇದು ಉತ್ತರಾಖಂಡದ ಚಿಕ್ಕ ಕೊಡುಗೆ ಎಂದು ಸಿಎಂ ಹೇಳಿದ್ದರು.
ಈ ಮೂಲಕ ಎಲ್ಲ ಧರ್ಮಗಳ ಮಹಿಳೆಯರು, ಪುರುಷರಿಗೆ ಏಕರೂಪದ ಕಾನೂನು ಅನ್ವಯವಾಗಲಿದೆ. ತಾರತಮ್ಯರಹಿತ, ಏಕತೆಯ ಸಮಾಜ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದೂ ಅವರು ಹೇಳಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.