ಬೆಂಗಳೂರು: ಬಹುಜನ ಸಮಾಜ ಪಾರ್ಟಿ ಲೋಕಸಭಾ ಚುನಾವಣೆಯ 25 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ.
ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದರು.
ಬಾಗಲಕೋಟೆ-ವೈ.ಸಿ.ಕಾಂಬಳೆ, ಬೆಂಗಳೂರು ಕೇಂದ್ರ- ಸತೀಶ್ ಚಂದ್ರ ಎಂ.ಬೆಂಗಳೂರು ಉತ್ತರ-ಚಿಕ್ಕಣ್ಣ,ಬೆಂಗಳೂರು ಗ್ರಾಮಾಂತರ – ಡಾ.ಚಿನ್ನಪ್ಪ ವೈ ಚಿಕ್ಕಹಾಗಡೆ, ಬೆಂಗಳೂರು ದಕ್ಷಿಣ – ಮಣ್ಣೂರ್ ನಾಗರಾಜು,ಬೆಳಗಾವಿ- ಯಮನಪ್ಪ ತಳವಾರ,ಬಳ್ಳಾರಿ – ಶಕುಂತಲಾ, ಬೀದರ್-ಪುಟ್ಟರಾಜು.ಹೆಚ್, ಬಿಜಾಪುರ- ಕಲ್ಲಪ್ಪ.ಆರ್.ತೊರವಿ, ಚಾಮರಾಜನಗರ (ಎಸ್.ಸಿ) ಸಿ.ಮಹದೇವಯ್ಯ, ಚಿಕ್ಕಬಳ್ಳಾಪುರ- ಆರ್.ಮುನಿಯಪ್ಪ, ಚಿತ್ರದುರ್ಗ ಎಸ್.ಸಿ.- ಅಶೋಕ್ ಚಕ್ರವರ್ತಿ, ದಕ್ಷಿಣ ಕನ್ನಡ-ಕಾಂತಪ್ಪ ಅಳಂಗಾರ್, ದಾವಣಗೆರೆ-ಮಲ್ಲೇಶ್.ಹೆಚ್,ಧಾರವಾಡ-ಶೋಭ ಬಳ್ಳಾರಿ,ಗುಲ್ಬರ್ಗ ಎಸ್.ಸಿ-ಹುಚ್ಚಪ್ಪ ವಟಾರ, ಹಾಸನ- ಗಂಗಾಧರ್ ಬಹುಜನ್, ಹಾವೇರಿ- ಮರಿಯಣ್ಣನವರ,ಕೋಲಾರ ಎಸ್.ಸಿ.- ಮೈಲಾರಪ್ಪ, ಮಂಡ್ಯ-ಶಿವಶಂಕರ್,ಮೈಸೂರು-ಚಂದ್ರ ಶೇಖರ್.ಪಿ. ಶಿವಮೊಗ್ಗ-ಎ.ಡಿ.ಶಿವಪ್ಪ,ತುಮಕೂರು-ರಾಜಸಿಂಹ ಜೆ.ಎನ್,ಉಡುಪಿ-ಚಿಕ್ಕಮಗಳೂರು- ಕೆ.ಟಿ.ರಾಧಾಕೃಷ್ಣ ಅವರನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುನಿಯಪ್ಪ ತಿಳಿಸಿದರು.
ಬಹುಜನ ಸಮಾಜ ಪಕ್ಷ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ನಾಯಕಿ ಮಾಯಾವತಿಯವರ ತೀರ್ಮಾನದಂತೆ ಎನ್.ಡಿ.ಎ ಹಾಗೂ ಇಂಡಿಯಾ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ,ಸಮಾಜಿಕ ಜಾಲತಾಣಗಳಲ್ಲಿ ಬಹುಜನ ಸಮಾಜ ಪಕ್ಷ ಒಳ ಒಪ್ಪಂದ ಮಾಡಿಕೊಂಡಿದೆ ಎಂಬು ಸತ್ಯಕ್ಕೆ ದೂರವಾದ ಮಾತು ಎಂದು ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿದರು.
ನಾಳೆಯಿಂದಲೇ ಪಕ್ಷದ ವತಿಯಿಂದ ಪ್ರಚಾರ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು,ರಾಜ್ಯದ ಒಂದೇರಡು ಕ್ಷೇತ್ರಗಳಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ರಾಜ್ಯದ ಮೂರು ನಾಲ್ಕು ವಿಭಾಗಗಳಲ್ಲಿ ಚುನಾವಣಾ ಪ್ರಚಾರ ಕಾರ್ಯನಡೆಸಲಿದ್ದಾರೆ ಎಂದು ಹೇಳಿದರು.
ಸುದ್ದಿ ಗೋಷ್ಟಿ ಯಲ್ಲಿ ರಾಜ್ಯ ಉಸ್ತುವಾರಿ ಎಂ.ಗೋಪಿ ನಾಥ್, ರಾಷ್ಟ್ರೀಯ ಖಚಾಂಚಿ ಡಾ.ಚಿನ್ನಪ್ಪ ಚಿಕ್ಕಹಾಗಡೆ, ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ ಮತ್ತಿತರರು ಭಾಗವಹಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.