ಬೆಂಗಳೂರು: ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ಸಾಮಾನ್ಯವಾಗಿ ಎರಡು ತಿಂಗಳ ಅವಧಿಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ. 5ರಷ್ಟು ರಿಯಾಯಿತಿಯನ್ನು ಬಿಬಿಎಂಪಿ ನೀಡುತ್ತಾ ಬಂದಿದೆ. ಆದರೆ, ಈ ವರ್ಷ ಶೇ 5ರ ರಿಯಾಯಿತಿ ಜುಲೈ ಅಂತ್ಯದ ವರೆಗೆ ಜಾರಿಯಲ್ಲಿರಲಿದೆ.
ಈ ಸಂಬಂಧ ಬಿಬಿಎಂಪಿ ಗುರುವಾರ ಸುತ್ತೋಲೆ ಹೊರಡಿಸಿದ್ದು, ಮಾದರಿ ನೀತಿ ಸಂಹಿತೆ ಜಾರಿಯಾಗುವ ನಿರೀಕ್ಷೆ ಇದೆ. ರಿಯಾಯಿತಿಯು 2024 ರ ಜುಲೈ 31ರ ವರೆಗೆ ಇರುತ್ತದೆ ಎಂದಿದೆ.
ಬಿಬಿಎಂಪಿ ಕಾಯ್ದೆಯ 2020 ರ ಸೆಕ್ಷನ್ 144 (8) ರ ಅಡಿಯಲ್ಲಿ, ಹಣಕಾಸಿನ ವರ್ಷದ ಆರಂಭದಲ್ಲಿ ತೆರಿಗೆ ಪಾವತಿ ಮಾಡುವ ಆಸ್ತಿ ಮಾಲೀಕರಿಗೆ ಸಂಸ್ಥೆಯು ಶೇ 5ರ ರಿಯಾಯಿತಿಯನ್ನು ನೀಡಲು ಅವಕಾಶವಿದೆ.
ರಾಜ್ಯ ಸರ್ಕಾರವು ಕಳೆದ ತಿಂಗಳು ಹೊಸ ಆಸ್ತಿ ತೆರಿಗೆ ವ್ಯವಸ್ಥೆಯ ಬಗ್ಗೆ ಇನ್ನಷ್ಟೇ ಅಧಿಕೃತ ಅಧಿಸೂಚನೆ ಬರಬೇಕಿದೆ. ಹೀಗಾಗಿ ಸ್ವಯಂ-ಮೌಲ್ಯಮಾಪನ ಯೋಜನೆಯ ಮೂಲಕ ಆಸ್ತಿ ತೆರಿಗೆ ಲೆಕ್ಕಾಚಾರವನ್ನು ಮುಂದುವರಿಸಬಹುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ವಾರ್ಷಿಕ ತೆರಿಗೆಯಲ್ಲಿ ಗಣನೀಯ ಹೆಚ್ಚಳದ ಬಗ್ಗೆ ನಿವಾಸಿಗಳು, ರಾಜಕೀಯ ಪಕ್ಷಗಳು ಮತ್ತು ವ್ಯಾಪಾರಿಗಳು ಕಳವಳ ವ್ಯಕ್ತಪಡಿಸಿದ ನಂತರ ಹೊಸ ತೆರಿಗೆ ವ್ಯವಸ್ಥೆಯನ್ನು ಸರ್ಕಾರ ತಡೆಹಿಡಿದಿದೆ.
ಮಾಲೀಕರು ಖಾತಾ ಪ್ರಮಾಣಪತ್ರವನ್ನು ಪಡೆಯುವ ಮೊದಲು ಆಸ್ತಿ ತೆರಿಗೆಯನ್ನು ಪಾವತಿಸಬಹುದಾದ ಹೊಸ ಯೋಜನೆಯನ್ನು ಈ ವಾರದ ಆರಂಭದಲ್ಲಿ ಬಿಬಿಎಂಪಿ ಪ್ರಾರಂಭಿಸಿದೆ. ಈ ಯೋಜನೆಯು ಅಧಿಕೃತವಾಗಿ ಮಾರ್ಚ್ 20 ರಂದು ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2024-25ನೇ ಸಾಲಿಗೆ 3,800 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹದ ಗುರಿಯನ್ನು ಬಿಬಿಎಂಪಿ ಹಾಕಿಕೊಂಡಿದೆ.
ಸ್ವಂತ ಮನೆಗಳನ್ನು ಕಟ್ಟುವವರಿಗೆ ಅನುಕೂಲವಾಗಲು ನಂಬಿಕೆ ರಕ್ಷೆ ಯೋಜನೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು. ಇದೇ ವೇಳೆ ಹೊಸ ತೆರಿಗೆ ಪದ್ಧತಿ ಬಗ್ಗೆ ಅವರು ಘೋಷಣೆ ಮಾಡಿದ್ದರು. 2008ರಲ್ಲಿ ಜಾರಿ ಮಾಡಲಾಗಿದ್ದ ಆಸ್ತಿ ತೆರಿಗೆ ಪದ್ಧತಿಯಲ್ಲಿ ಆಸ್ತಿಗಳನ್ನು ಒಟ್ಟು 18 ವರ್ಗೀಕರಣ ಮಾಡಲಾಗಿತ್ತು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದೀಗ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಲಾಗಿದ್ದು, 6 ವರ್ಗೀಕರಣಗಳನ್ನು ಮಾಡಲಾಗಿದೆ. ವಸತಿ (ಸ್ವಂತ ಬಳಕೆ ಹಾಗೂ ಬಾಡಿಗೆದಾರರ ಬಳಕೆ), ವಾಣಿಜ್ಯ, ಕೈಗಾರಿಕಾ, ಸ್ಟಾರ್ ಹೊಟೇಲ್, ವಿನಾಯಿತಿ ನೀಡಲಾದ ಹಾಗೂ ಸಂಪೂರ್ಣ ಖಾಲಿ ಜಮೀನುಗಳು ಎಂದು ವರ್ಗೀಕರಣ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.