ಮನೆ ಸುದ್ದಿ ಜಾಲ ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದೇನೆ: ನಿತ್ಯಾನಂದ

ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದೇನೆ: ನಿತ್ಯಾನಂದ

0

ರಾಮನಗರ(Ramnagar): ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ ಎಂದು ಸ್ವಯಂಘೋಷಿತ ಕೈಲಾಸ ದೇಶದ ಸಂಸ್ಥಾಪಕ ಹಾಗೂ ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಘೋಷಿಸಿದ್ದಾರೆ.

ಈ ಬಗ್ಗೆ ನಿತ್ಯಾನಂದನ ಕೈಲಾಸ ಪೀಠದ್ದು ಎನ್ನಲಾದ ಫೇಸ್‌ಬುಕ್‌ ಪೇಜ್‌ನಲ್ಲಿ ಈ ಪೋಸ್ಟ್ ಹಾಕಲಾಗಿದೆ. ಅದರಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದ್ದು, ನಿತ್ಯಾನಂದ ಕೈ ಬರಹ ಎನ್ನಲಾದ ಫೋಟೋ ಕೂಡ ಇದೆ.

ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಆದರೆ, ಅದೆಲ್ಲ ಸುಳ್ಳು. ಈಗಲೂ 20ಕ್ಕೂ ಹೆಚ್ಚು ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ, ನೀರು–ಆಹಾರ ಸ್ವೀಕರಿಸುತ್ತಿಲ್ಲ ಎಂದೂ ಪೋಸ್ಟ್​ನಲ್ಲಿ ನಿತ್ಯಾನಂದ ಸ್ಪಷ್ಟನೆ ಕೊಟ್ಟಿದ್ದಾರೆ.