ಮನೆ ರಾಜ್ಯ ತೀರ್ಥಹಳ್ಳಿ: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ತೀರ್ಥಹಳ್ಳಿ: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

0

ತೀರ್ಥಹಳ್ಳಿ: ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟ ಘಟನೆ ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಳುಕೊಪ್ಪದಲ್ಲಿ‌ ಮಾ.17ರ ಭಾನುವಾರ ಸಂಜೆ ಸಂಭವಿಸಿದೆ.

ಪುಟ್ಟಪ್ಪ ಕಿಟ್ಟಯ್ಯ ಗೌಡ (60) ಮೃತಪಟ್ಟ ವ್ಯಕ್ತಿ.

ಪುಟ್ಟಪ್ಪ ಬಿಳುಕೊಪ್ಪ ಬಳಿ ಬಸ್ ಇಳಿದು ಮನೆಗೆ ನಡೆದುಕೊಂಡು ಹೋಗುವಾಗ ಸಾಗರದಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ತಕ್ಷಣವೇ ತೀರ್ಥಹಳ್ಳಿ ಆಸ್ಪತ್ರೆಗೆ ಕರೆದುಕೊಂಡು ಹೋದರು, ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ .

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.