ಲೈಂಗಿಕ ಅಪರಾಧಗಳ ಸಂತ್ರಸ್ತರನ್ನು ಮಹಿಳಾ ಸ್ತ್ರೀರೋಗ ತಜ್ಞರೇ ಪರೀಕ್ಷೆ ನಡೆಸಬೇಕು ಎಂಬ ಶಿಷ್ಟಾಚಾರ ಪ್ರಶ್ನಿಸಿ ಕೇರಳದ ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಸ್ತ್ರೀರೋಗ ತಜ್ಞರು ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಆದಾಗ್ಯೂ ಅರ್ಜಿ ಸಲ್ಲಿಸಿರುವ ಸ್ತ್ರೀ ರೋಗ ತಜ್ಞರು ತಮ್ಮ ಅಹವಾಲುಗಳನ್ನು ಸೂಕ್ತ ಸರ್ಕಾರಿ ಅಧಿಕಾರಿಗಳ ಮುಂದಿಡಲು ನ್ಯಾ. ದೇವನ್ ರಾಮಚಂದ್ರನ್ ಸ್ವಾತಂತ್ರ್ಯ ನೀಡಿದರು.
ಲೈಂಗಿಕ ಅಪರಾಧಗಳ ಸಂತ್ರಸ್ತರ ಪರೀಕ್ಷೆಗಾಗಿ ಕೇರಳ ವೈದ್ಯಕೀಯ- ಕಾನೂನು ಶಿಷ್ಟಾಚಾರ- 2019 ರ ಕಲಂ 6 ಮತ್ತು ಏಪ್ರಿಲ್ 2023 ರಲ್ಲಿ ಮಾಡಿದ ತಿದ್ದುಪಡಿಯನ್ನು ಪ್ರಮುಖವಾಗಿ ಸ್ತ್ರೀರೋಗ ತಜ್ಞರು ಪ್ರಶ್ನಿಸಿದ್ದರು. 2023ರ ತಿದ್ದುಪಡಿಯ ಪ್ರಕಾರ, ಲೈಂಗಿಕ ಅಪರಾಧಕ್ಕೆ ತುತ್ತಾದ ಸಂತ್ರಸ್ತರನ್ನು ಪರೀಕ್ಷಿಸುವಂತೆ ಪೊಲೀಸರು ಮಹಿಳಾ ಸ್ತ್ರೀರೋಗ ತಜ್ಞರಿಗಷ್ಟೇ ಮನವಿ ಮಾಡಬಹುದಾಗಿದೆ.
ಯಾವುದೇ ನೋಂದಾಯಿತ ವೈದ್ಯರ ಬದಲು ಸ್ತ್ರೀ ರೋಗ ತಜ್ಞರಷ್ಟೇ ಲೈಂಗಿಕ ಅಪರಾಧಕ್ಕೆ ತುತ್ತಾದ ಸಂತ್ರಸ್ತರನ್ನು ಪರೀಕ್ಷೆ ನಡೆಸುವಂತೆ ಕಡ್ಡಾಯಗೊಳಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ (ಪೋಕ್ಸೊ ಕಾಯಿದೆ) ಸೆಕ್ಷನ್ 27 (2) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 164ಎಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
ಕೇರಳ ವೈದ್ಯಕೀಯ- ಕಾನೂನು ಶಿಷ್ಟಾಚಾರ- 2019 ರ ಕಲಂ 6ರಲ್ಲಿ ಕಂಡು ಬರುವ ಆದೇಶ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಾರ್ಗಸೂಚಿಗಳಲ್ಲಿ ಇಲ್ಲ ಎಂದು ಕೂಡ ಹೇಳಿದ್ದರು.
ಕಡಿಮೆ ಸಿಬ್ಬಂದಿ ಇರುವ ಆಸ್ಪತ್ರೆಗಳಲ್ಲಿ ಮಹಿಳಾ ಸ್ತ್ರೀರೋಗತಜ್ಞರೇ ಲೈಂಗಿಕ ದೌರ್ಜನ್ಯಕ್ಕೆ ತುತ್ತಾದವರ ಪರೀಕ್ಷೆ ನಡೆಸಲು ಕಾಯಬೇಕಾಗುವುದರಿಂದ ಈ ಶಿಷ್ಟಾಚಾರ ಜಾರಿ ಲೈಂಗಿಕ ದೌರ್ಜನ್ಯಕ್ಕೊಳಗಾದವರ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದರು.
ವೈದ್ಯಕೀಯ ಕಾನೂನು ಪರೀಕ್ಷೆಯ ಜವಾಬ್ದಾರಿಯನ್ನು ನಿರ್ದಿಷ್ಟ ರೀತಿಯ ತಜ್ಞರಿಗಷ್ಟೇ ವಹಿಸುವುದು ಪ್ರಭುತ್ವ ಸಾಕಾರಗೊಳಿಸಲು ಬಯಸುವ ನಿಜವಾದ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ವಿವರಿಸಿದ್ದರು.
ಸಿಆರ್ ಪಿಸಿ ಸೆಕ್ಷನ್ 53 (2) (ಬಿ) ವ್ಯಾಖ್ಯಾನದೊಳಗೆ ಬರುವ ಎಲ್ಲಾ ನೋಂದಾಯಿತ ವೈದ್ಯರು ಸಿಆರ್ಪಿಸಿ ಸೆಕ್ಷನ್ 164 ಎನಲ್ಲಿ ತಿಳಿಸಿರುವಂತೆ ಸಂತ್ರಸ್ತರ ವೈದ್ಯಕೀಯ ಪರೀಕ್ಷೆ ನಡೆಸಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.
ವೈದ್ಯಕೀಯ ಶಿಕ್ಷಣ ಪಡೆಯುವಾಗಲೇ ವೈದ್ಯಕೀಯಕ್ಕೆ ಸಂಬಂಧಿಸಿದ ಎಲ್ಲಾ ಕ್ಷೇತ್ರಗಳನ್ನು ವೈದ್ಯರು ಅಭ್ಯಾಸ ಮಾಡಿರುವುದರಿಂದ ಲೈಂಗಿಕ ಅಪರಾಧಗಳಿಂದ ಸಂತ್ರಸ್ತರನ್ನು ಪರೀಕ್ಷಿಸಲು ಎಲ್ಲಾ ಭಾರತೀಯ ವೈದ್ಯಕೀಯ ಪದವೀಧರರು ಸಮರ್ಥರಾಗಿದ್ದಾರೆ ಎಂದು ಮನವಿ ಸಲ್ಲಿಸಲಾಗಿತ್ತು.
ಮಹಿಳಾ ಸ್ತ್ತೀ ರೋಗತಜ್ಞರ ಮೇಲೆ ಮಾತ್ರ ಹೊರೆ ಹೊರಿಸುವುದು ಕಾನೂನುಬಾಹಿರ, ಅನುಚಿತ, ಅಸಮಂಜಸ ಹಾಗೂ ನಿರಂಕುಶ ನಿರ್ಧಾರವಾಗುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.
ಆದ್ದರಿಂದ ಶಿಷ್ಟಾಚಾರದ ಕಲಂ 6ಕ್ಕೆ ಮಾರ್ಪಾಡು ಮಾಡಬೇಕು. ಸಂತ್ರಸ್ತರನ್ನು ಪರೀಕ್ಷಿಸಲು ಎಲ್ಲಾ ನೋಂದಾಯಿತ ವೈದ್ಯರಿಗೆ ಅಗತ್ಯ ತರಬೇತಿ ನೀಡಬೇಕು ಎಂದು ವಿನಂತಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.