ಮನೆ ಕಾನೂನು ಭೂ ಪರಿವರ್ತನೆ ಮಾಡಿಕೊಡಲು ಲಂಚ: ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಭೂ ಪರಿವರ್ತನೆ ಮಾಡಿಕೊಡಲು ಲಂಚ: ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

0

ತುಮಕೂರು: ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು 30 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಮಾರ್ಚ್ 20 ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಾಲ್ಲೂಕಿನ ಗೋಡೆಕೆರೆ ರೈತ ಮಲ್ಲಿಕಾರ್ಜುನ್ ಅವರಿಗೆ ಸೇರಿದ 33 ಗುಂಟೆ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ರೂ. ಲಂಚಕ್ಕೆ  ಬೇಡಿಕೆ ಇಟ್ಟಿದ್ದರು. ಬುಧವಾರ ಬೆಳಿಗ್ಗೆ 20 ಸಾವಿರ ರೂ ಹಣ ಪಡೆದಿದ್ದರು. ಅದೇ ದಿನ ರಾತ್ರಿ 8 ಗಂಟೆಯ ಸಮಯದಲ್ಲಿ ತಮ್ಮ ನಿವಾಸದಲ್ಲಿ 30 ಸಾವಿರ ರೂ. ಹಣ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ.

ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಸದ್ಯ ಗೀತಾ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.