ಅಹಮದಾಬಾದ್: ಒಳ್ಳೆಯ ಉದ್ದೇಶದಿಂದ 2017ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ ಅನ್ನು ಜಾರಿಗೆ ತಂದಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಒಂದು ವೇಳೆ ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ಕೋರ್ಟ್ ಹೆಚ್ಚಿನ ನಿರ್ದೇಶನ ನೀಡಿದರೆ ರಾಜಕೀಯ ಪಕ್ಷಗಳು ಒಟ್ಟು ಕುಳಿತು ಚರ್ಚೆ ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗುಜರಾತ್ ನ ಗಾಂಧಿನಗರದ ಗಿಫ್ಟ್ ಸಿಟಿಯಲ್ಲಿ ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶುಕ್ರವಾರ ಅವರು ಮಾತನಾಡಿದರು. .
ಅರುಣ್ ಜೇಟ್ಲಿಯವರು ಕೇಂದ್ರ ಹಣಕಾಸು ಸಚಿವರಾಗಿದ್ದಾಗ, ಚುನಾವಣಾ ಬಾಂಡ್ ಬಗ್ಗೆ ಚರ್ಚೆ ಮಾಡುವ ವೇಳೆ ನಾನು ಅದರ ಭಾಗವಾಗಿದ್ದೆ. ಸಂಪನ್ಮೂಲ ಇಲ್ಲದೆ ಯಾವುದೇ ಪಕ್ಷಕ್ಕೂ ಉಳಿಗಾಲವಿಲ್ಲ. ಕೆಲವು ದೇಶಗಳಲ್ಲಿ ಸರ್ಕಾರವೇ ರಾಜಕೀಯ ಪಕ್ಷಗಳಿಗೆ ಹಣಕಾಸಿನ ನೆರವು ನೀಡುತ್ತದೆ. ಆದರೆ ಭಾರತದಲ್ಲಿ ಆ ವ್ಯವಸ್ಥೆ ಇಲ್ಲ. ಹೀಗಾಗಿ ನಾವು ಈ ವಿಧಾನವನ್ನು (ಚುನಾವಣಾ ಬಾಂಡ್) ಆಯ್ಡುಕೊಂಡಿದ್ದೆವು ಎಂದು ಹೇಳಿದ್ದಾರೆ.
ರಾಜಕೀಯ ಪಕ್ಷಗಳಿಗೆ ನೇರವಾಗಿ ದೇಣಿಗೆ ಸಿಗಬೇಕು ಎನ್ನುವುದು ಚುನಾವಣಾ ಬಾಂಡ್ ನ ಉದ್ದೇಶವಾಗಿತ್ತು. ಅಧಿಕಾರ ಬದಲಾದರೆ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ದೇಣಿಗೆ ನೀಡಿದವರ ವಿವರ ಗೌಪ್ಯವಾಗಿಡಲಾಗಿತ್ತು ಎಂದಿದ್ದಾರೆ.
ನೀವು ವಾಸ್ತವವನ್ನು ಗಮನಿಸಬೇಕು. ಪಕ್ಷಗಳು ಹೇಗೆ ಚುನಾವಣೆಯನ್ನು ಎದುರಿಸುತ್ತವೆ? ಪಾರದರ್ಶಕತೆ ತರಲು ನಾವು ಚುನಾವಣಾ ಬಾಂಡ್ ಜಾರಿಗೆ ತಂದೆವು. ಬಾಂಡ್ ಜಾರಿ ವೇಳೆ ನಮ್ಮ ಉದ್ದೇಶ ಒಳ್ಳೆಯದಿತ್ತು. ಇದರಲ್ಲಿ ಸಮಸ್ಯೆ ಇದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟರೆ ಹಾಗೂ ಅದನ್ನು ಸರಿಪಡಿಸಿ ಎಂದು ಹೇಳಿದರೆ ಎಲ್ಲಾ ಪಕ್ಷಗಳು ಕುಳಿತು ಚರ್ಚೆ ಮಾಡಬೇಕು’ ಎಂದು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.