ವಿಜಯಪುರ: ಇದು ನನ್ನ ಕೊನೆಯ ಚುನಾವಣೆ. ಕಳೆದ ಬಾರಿ 2.60 ಲಕ್ಷ ಮತಗಳಿಂದ ಗೆದ್ದಿದ್ದೆ. ಈ ಬಾರಿ 2.70 ಲಕ್ಷ ಮತಗಳಿಂದ ಗೆಲ್ಲಲಿದ್ದೇನೆ. ಕನಿಷ್ಟ ಒಂದು ವೋಟ್ ನಿಂದಾದರೂ ಗೆಲ್ಲುವುದು ನಾನೇ ಎಂದು ಹಾಲಿ ಸಂಸದ ರಮೇಶ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಮೇಶ ಜಿಗಜಿಣಗಿ, ಈ ಸಲ ನಾನು ನನ್ನ ಮಕ್ಕಳು ಟಿಕೆಟ್ ಬೇಡ ಎಂದು ನಿರ್ಧರಿಸಿದ್ದೆವು. ಆದರೆ ಪಕ್ಷ ಟಿಕೆಟ್ ನೀಡಿದ್ದು, ಚುನಾವಣೆ ಎದುರಿಸುತ್ತಿದ್ದೇನೆ ಎಂದರು.
ನನಗೆ ಟಿಕೆಟ್ ತಪ್ಪಿಸಲು ಕೆಲವರು ಯತ್ನಿಸಿದರು. ಹೈಕಮಾಂಡ್ ನನಗೆ ಟಿಕೆಟ್ ನೀಡಿದೆ. ಬಂಡಾಯ ಅಭ್ಯರ್ಥಿ ವಿರುದ್ಧ ನಾನು ಪ್ರತಿಕ್ರಿಯೆ ನೀಡಲಾರೆ. ಪ್ರಚಾರದಲ್ಲಿ ತೊಡಗಿರುವ ನಾನು ಹೋದಲ್ಲೆಲ್ಲ ಜನರು ನೀವು ಬರಬೇಡಿ, ಮತ ಹಾಕಿ ಗೆಲ್ಲಿಸುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಮತ್ತೊಮ್ಮೆ ಗೆಲುವು ನನ್ನದೇ ಎಂದರು.
ಚುನಾವಣೆಯಲ್ಲಿ ದಲಿತರು ಎಡ-ಬಲ ಎಂದು ಸಂಘರ್ಷಕ್ಕೆ ಇಳಿಯುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಮಗನಿಗೆ ಬಿಜೆಪಿ ಟಿಕೆಟ್ ವಂಚಿತ ಕೆ.ಎಸ್.ಈಶ್ವರಪ್ಪ ಅವರು ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವಷ್ಟು ನಾನು ದೊಡ್ಡವನಲ್ಲ. ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ ಗರಡಿಯಲ್ಲಿ ಬೆಳೆದಿರುವ ನಾನು ಸಂಘ ಪರಿವಾರದ ಹಿನ್ನೆಲೆಯ ಈಶ್ವರಪ್ಪ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಎಂದರು.
ಅವರ ಮಗ ಕಾಂಗ್ರೆಸ್ ಪಕ್ಷದಲ್ಲಿ ಇರುವ ಕಾರಣ ಹಾಗೂ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ವಯಸ್ಸಾಗಿರುವುದರಿಂದ ರಾಜೀನಾಮೆ ನೀಡಿದ್ದಾರೆ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.