ಮುಂಬೈ: ಭಾರತೀಯ ನೌಕಪಡೆ ಇತ್ತೀಚಿಗೆ ವಶಕ್ಕೆ ಪಡೆದಿದ್ದ 35 ಸೊಮಾಲಿಯಾ ಕಡಲ್ಗಳ್ಳರನ್ನು ಕಸ್ಟಮ್ಸ್ ಮತ್ತು ವಲಸೆಯ ವಿಧಿವಿಧಾನಗಳನ್ನು ಪೂರೈಸಿದ ನಂತರ ಶನಿವಾರ ಬೆಳಗ್ಗೆ ಪೊಲೀಸರಿಗೆ ಹಸ್ತಾಂತರಿಸಲಾಯಿತು.
ಇತ್ತೀಚೆಗೆ, ಭಾರತೀಯ ನೌಕಾಪಡೆಯು ಕಡಲ್ಗಳ್ಳತನ-ವಿರೋಧಿ ಕಾರ್ಯಾಚರಣೆಯಲ್ಲಿ MV ರುಯೆನ್ ಹಡಗಿನ 17 ಸಿಬ್ಬಂದಿಯನ್ನು ರಕ್ಷಿಸಿ, 35 ಸೊಮಾಲಿಯಾ ಕಡಲ್ಗಳ್ಳರನ್ನು ವಶಕ್ಕೆ ಪಡೆದಿತ್ತು.
ಕಳೆದ ವರ್ಷ ಡಿಸೆಂಬರ್ ನಲ್ಲಿ ಸೊಮಾಲಿಯಾ ಕಡಲ್ಗಳ್ಳರು ಬಲ್ಗೇರಿಯನ್ ಹಡಗು ಎಂವಿ ರುಯೆನ್ ಅನ್ನು ವಶಪಡಿಸಿಕೊಂಡಿದ್ದರು. ಆದರೆ, ಕಳೆದ ವಾರ ಸಮುದ್ರದಲ್ಲಿ ಕಡಲ್ಗಳ್ಳತನ ಕೃತ್ಯವೆಸಗುವ ಉದ್ದೇಶದಿಂದ ರುಯೆನ್ ಸೊಮಾಲಿ ಜಲವನ್ನು ತೊರೆದಾಗ ಭಾರತೀಯ ನೌಕಾಪಡೆ ಅದನ್ನು ತಡೆಯಲು ಕ್ರಮ ಕೈಗೊಂಡಿತು.
ಮಾಹಿತಿ ಆಧರಿಸಿ, ಭಾರತೀಯ ನೌಕಾಪಡೆಯು ಈ ಹಡಗಿನ ನೆರವಿಗೆ ಐಎನ್ ಎಸ್ ಕೋಲ್ಕತ್ಕ ನೌಕೆಯನ್ನು ರವಾನಿಸಿತ್ತು. ನಂತರ ಮಾರ್ಚ್ 15 ರಂದು ಐಎನ್ ಎಸ್ ಕೋಲ್ಕತ್ತ, ರುಯೆನ್ ಹಡಗು ತಡೆದು ಸ್ಟೀರಿಂಗ್ ಸಿಸ್ಟಮ್ ಮತ್ತು ನ್ಯಾವಿಗೇಷನಲ್ ಸಲಕರಣೆಗಳನ್ನು ನಿಷ್ಕ್ರೀಯಗೊಳಿಸಿತ್ತು. ಈ ಕಾರ್ಯಾಚರಣೆಯಿಂದ ಭಾರತೀಯ ನೌಕಾಪಡೆ ಮಾರ್ಚ್ 16 ರಂದು MV Ruen ನ ಎಲ್ಲಾ 17 ಮೂಲ ಸಿಬ್ಬಂದಿಯನ್ನು ಯಾವುದೇ ಗಾಯವಿಲ್ಲದೆ ಕಡಲುಗಳ್ಳರ ಹಡಗಿನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಅಲ್ಲದೆ, 35 ಸೋಮಾಲಿ ಕಡಲ್ಗಳ್ಳರು ಅದೇ ದಿನ ಶರಣಾಗಿದ್ದರು.
ಶನಿವಾರದಂದು ಕಡಲ್ಗಳ್ಳರನ್ನು ಮುಂಬೈ ಪೊಲೀಸರಿಗೆ ಒಪ್ಪಿಸಲಾಗಿತ್ತು. ಮುಂಬೈನ ನೇವಲ್ ಡಾಕ್ ಯಾರ್ಡ್ ನಿಂದ ಕಡಲ್ಗಳ್ಳರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅಧ್ಯಕ್ಷ ರುಮೆನ್ ರಾದೇವ್ ಸೇರಿದಂತೆ ಬಲ್ಗೇರಿಯನ್ ನಾಯಕರು ಈ ಕಾರ್ಯಾಚರಣೆಗಾಗಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ.
7 ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ‘ರುಯೆನ್’ ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸಿದ (ದ) ನೌಕಾಪಡೆಯ ಕೆಚ್ಚೆದೆಯ ಕ್ರಮಕ್ಕಾಗಿ (ಪಿಎಂ ಮೋದಿ) ನನ್ನ ಪ್ರಾಮಾಣಿಕ ಕೃತಜ್ಞತೆಗಳು” ಎಂದು ರಾದೇವ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಲ್ಗೇರಿಯಾದ ವಿದೇಶಾಂಗ ಸಚಿವೆ ಮರಿಯಾ ಗೇಬ್ರಿಯಲ್, ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಕಡಲ್ಗಳ್ಳತನ-ವಿರೋಧಿ ಕಾರ್ಯಾಚರಣೆಯಲ್ಲಿ ಏಳು ಬಲ್ಗೇರಿಯನ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆಗೆ ಧನ್ಯವಾದ ಅರ್ಪಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.