ಮನೆ ರಾಜ್ಯ ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ: ವಿ ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ: ವಿ ಸೋಮಣ್ಣ

0

ತುಮಕೂರು: ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ವಿ ಸೋಮಣ್ಣ, ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ. ಆದರೆ, ಕಾಂಗ್ರೆಸ್​ನವರು ಕೆಲವ ವಿಚಾರ ತಿರುಚುತ್ತಾರೆ. ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.

ಅಂಥಹ ಪುಣ್ಯಾತ್ಮ ಅಂಬೇಡ್ಕರ್ ಅವರ ಸಂಸ್ಕಾರಕ್ಕೇ ಕಾಂಗ್ರೆಸ್ ​ನವರು ಜಾಗ ಕೊಟ್ಟಿಲ್ಲ. ಕಾಂಗ್ರೆಸ್​ ನವರಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸಂವಿಧಾನ ಬದಲಾವಣೆ ಮಾಡುತ್ತೇನೆ ಅಂತಾ ಯಾರೂ ಹೇಳಿಲ್ಲ. ಹೆಗಡೆ ಅವರು ತಮ್ಮ ಸ್ವಂತ ಅಭಿಪ್ರಾಯ ಎಂದಿದ್ದಾರೆ. ಅದಕ್ಕೆ ಅವರಿಗೆ ಶಿಕ್ಷೆ ಕೂಡ ಆಗಿದೆ ಎಂದರು.

2019 ಲೋಕಸಭೆ ಚುನಾವಣೆಯಲ್ಲಿ ಹೆಗಡೆ ಗೆದ್ದ ನಂತರ ಜನಸಂಪರ್ಕಕ್ಕೆ ಬಂದಿರಲಿಲ್ಲ. ಕಾರ್ಯಕರ್ತರ ಕೈಗೂ ಸಿಗುತ್ತಿರಲಿಲ್ಲ. ನಾಲ್ಕೂವರೆ ವರ್ಷಗಳ ನಂತರ ಅಂದರೆ, 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗಲು ಆರಂಭಿಸಿದ್ದರು. ಮತ್ತೊಮ್ಮೆ ಮೋದಿ ಎನ್ನುವ ಕಾರ್ಯಕ್ರಮದಡಿ ಕಾರ್ಯಕರ್ತರ ಸಭೆಗಳನ್ನು ನಡೆಸುತ್ತಾ ಪ್ರಚಾರ ನಡೆಸುತ್ತಿದ್ದರು.