ಮನೆ ಅಪರಾಧ ಆನೇಕಲ್: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆಯನ್ನೇ ಹತ್ಯೆಗೈದ ಮೈದುನ

ಆನೇಕಲ್: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆಯನ್ನೇ ಹತ್ಯೆಗೈದ ಮೈದುನ

0

ಆನೇಕಲ್: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆಯನ್ನೇ ಮೈದುನ ಹತ್ಯೆಗೈದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೊಸೂರು ಗ್ರಾಮದ ಮುಖ್ಯರಸ್ತೆಯ ಸಿಂಗಸಂದ್ರದಲ್ಲಿ ನಡೆದಿದೆ.

 ಬಿಹಾರ ಮೂಲದ ಗುಡಿಯಾ ಬೇಬಿ(42) ಯನ್ನು ರಾಜೇಶ್ ಕುಮಾರ್ ಹತ್ಯೆ ಮಾಡಿದ್ದಾರೆ. ಮೊಬೈಲ್ ​​ಗಾಗಿ ಅಕ್ಕ ಗುಡಿಯಾ ಬೇಬಿ ಹಾಗೂ ತಂಗಿ ಗೀತಾ ಕುಮಾರಿ ಜಗಳ ಮಾಡಿದ್ದಾರೆ. ಜಗಳ ಬಿಡಿಸಲು ಬಂದಿದ್ದ ಗುಡಿಯಾ ತಂಗಿ ಗಂಡ ರಾಜೇಶ್​ ಕುಮಾರ್ ​ನನ್ನ ಗುಡಿಯಾ ಬೇಬಿ ನಿಂದಿಸಿದ್ದಾಳೆ. ಹೀಗಾಗಿ ಸಿಟ್ಟಿನಿಂದ ಅತ್ತಿಗೆ ಮೇಲೆ ದೊಣ್ಣೆಯಿಂದ ಮೈದುನ ಥಳಿಸಿದ್ದಾರೆ.

ಹಲ್ಲೆಗೊಳಗಾಗಿದ್ದ ಗುಡಿಯಾ ಬೇಬಿ ಗಾಯಗೊಂಡಿದ್ದರು. ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಾಜೇಶ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.