ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಚಿವರನ್ನೇ ಕಣಕ್ಕಿಳಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯೋಜನೆಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅಲೆಗೆ ಹೆದರಿದ ಸಚಿವರು ಯಾರೊಬ್ಬರೂ ಸ್ಪರ್ಧಿಸಲು ಮುಂದೆ ಬರಲೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದರು.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪ್ರವಾಸದಲ್ಲಿರುವ ಅವರು, ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
18 ಮಂದಿ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಸಿಎಂ ಹಾಗೂ ಡಿಸಿಎಂ ಮುಂದಾಗಿದ್ದರು. ಆದರೆ, ಸೋಲಿನ ಭೀತಿಯಿಂದ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ. ಕಡಿಮೆ ಅವಧಿಯಲ್ಲಿ ‘ಕೈ’ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಯಾರ ಪರವಾಗಿಯೂ ಈ ಸರ್ಕಾರವಿಲ್ಲ ಎಂದು ಜನ ಬೇಸತ್ತಿದ್ದಾರೆ. ಜನಪ್ರಿತೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷವೀಗ ನಮ್ಮ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಬಿಜೆಪಿಯಲ್ಲಿನ ಬಂಡಾಯ ಬಗ್ಗೆ ಪ್ರತಿಕ್ರಿಯೆ ನೀಡಿ, ಇನ್ನು 4 ದಿನಗಳಲ್ಲಿ ಮ್ಯಾಜಿಕ್ ನಡೆಯುತ್ತದೆ ನೋಡುತ್ತಿರಿ ಎಂದು ಹೇಳಿದರು. ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಅವರದ್ದು ಸೇರಿದಂತೆ ಎಲ್ಲಾ ಬಂಡಾಯವೂ ಬಗೆಹರಿಯಲಿದೆ. ಇನ್ನು ನಾಲ್ಕು ದಿನಗಳಲ್ಲಿ ಎಲ್ಲ ಬಂಡಾಯವೂ ಬಗೆಹರಿಯುತ್ತದೆ. ಯಡಿಯೂರಪ್ಪ ಎಲ್ಲಾ ಕಡೆ ಹೋಗಿ ಬಂಡಾಯ ಶಮನ ಮಾಡುತ್ತಾರೆ. ನಾಲ್ಕು ದಿನಗಳಲ್ಲಿ ಆ ಚಮತ್ಕಾರ ನಡೆಯಲಿದೆ ನೋಡುತ್ತಾ ಇರಿ ಎಂದು ಅವರು ಹೇಳಿದ್ದಾರೆ.
ಪಕ್ಷದ ಎಲ್ಲಾ ನಿರ್ಧಾರಗಳನ್ನು ನಾನಾಗಲೀ ಯಡಿಯೂರಪ್ಪನವರಾಗಲೀ ಕೈಗೊಳ್ಳುವುದಿಲ್ಲ. ಪಕ್ಷದ ವರಿಷ್ಠರ ನಿರ್ಧಾರಗಳೇ ಅಂತಿಮ. ನಮ್ಮ ಮಾತು ಕೇಳಿ ಪಕ್ಷದ ವರಿಷ್ಠರು ಎಲ್ಲ ನಿರ್ಧಾರ ಕೈಗೊಳ್ಳುತ್ತಿಲ್ಲ. ಪಕ್ಷದ ಹೈಕಮಾಂಡ್ ನಾಯಕರಿಗೆ ಎಲ್ಲವೂ ಸಹ ಗೊತ್ತಿದೆ. ಮೋದಿ ಅಲೆ ಮತ್ತು ನಾಯಕತ್ವಕ್ಕಾಗಿ ಎಲ್ಲರೂ ಕೆಲಸ ಮಾಡುತ್ತಾರೆ. ಪಕ್ಷದ ಎಲ್ಲಾ ನಾಯಕರು ಒಂದಾಗಿ ಕೆಲಸ ಮಾಡುತ್ತಾರೆ ಎಂದು ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ವಿಜಯೇಂದ್ರ ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಜತೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.