ಮನೆ ರಾಜ್ಯ ಕೆ.ಹೆಚ್​​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಐವರು ಶಾಸಕರ ರಾಜೀನಾಮೆ: ಕೊತ್ತೂರು ಮಂಜುನಾಥ್ ಬೆದರಿಕೆ

ಕೆ.ಹೆಚ್​​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಐವರು ಶಾಸಕರ ರಾಜೀನಾಮೆ: ಕೊತ್ತೂರು ಮಂಜುನಾಥ್ ಬೆದರಿಕೆ

0

ಕೋಲಾರ: ಸಚಿವ ಕೆ.ಹೆಚ್​​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಬೆದರಿಕೆ ಹಾಕಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆ.ಹೆಚ್​.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್​ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್​​​ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್​​ ರಾಜೀನಾಮೆ ನೀಡುತ್ತೇವೆ ಎಂದರು.

12 ಗಂಟೆಗೆ ಸುಮಾರಿಗೆ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ನಮ್ಮ ಬಣಕ್ಕೆ ಟಿಕೆಟ್ ನೀಡುವಂತೆ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ದು. ಹೈಕಮಾಂಡ್​ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ನಾನು, ರಮೇಶ್ ​​ಕುಮಾರ್ ಸೇರಿ ಒಟ್ಟಿಗೆ ಕೆಲಸ ಮಾಡುವುದಾಗಿ ಹೇಳಿದ್ದೇವೆ ಎಂದು ತಿಳಿಸಿದರು.