ಮನೆ ರಾಜ್ಯ ರಸ್ತೆ ಅಪಘಾತ ಓರ್ವ ವ್ಯಕ್ತಿ ಸಾವು: ಇಬ್ಬರ ಸ್ಥಿತಿ ಗಂಭೀರ

ರಸ್ತೆ ಅಪಘಾತ ಓರ್ವ ವ್ಯಕ್ತಿ ಸಾವು: ಇಬ್ಬರ ಸ್ಥಿತಿ ಗಂಭೀರ

0

ಶ್ರೀರಂಗಪಟ್ಟಣ:ಚಾಲಕನ ನಿಯಂತ್ರಣ ತಪ್ಪಿ ಕಾರು ಅರಣ್ಯಪಕ್ಕದ ಗುಂಡಿಗೆ ಬಿದ್ದು ಅಪಘಾತವಾಗಿ ಓರ್ವ ಮೃತಪಟ್ಟು ಚಾಲಕ ಸೇರಿ ಇಬ್ಬರಿಗೆ ಗಂಭೀರವಾಗಿರುವ ಘಟನೆ ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ನಡೆದಿದೆ.

ವೆಂಕಟೇಶ್ (೬೨) ಮೃತಪಟ್ಟ ವ್ಯಕ್ತಿ . ಈತನ ಪತ್ನಿ ರಶ್ಮಿ ಹಾಗೂ ಕಾರಿನ ಚಾಲಕ ಗಿರೀಶ್‌ಗೆ ಕೈಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು- ಮೈಸೂರು ಹೈವೆ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮರಗಿಡಗಳಿಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣ ನಜ್ಜಾಗಿರುವುದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿ ಮೃತ ವ್ಯಕ್ತಿಯ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಗಂಬೀರಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.