ಮೈಸೂರು: ದೇವನೂರು ಗ್ರಾಮದ ಡಿ.ಎಸ್.ರಾಕೇಶ್ರವರ ಮೇಲೆ ದಿ:೧೦-೦೭-೨೦೨೨ ರಂದು ಸಿ.ಮಹೇಶ್ @ ಜೋಗಿ ಎಂಬುವವರು ಕೊಲೆ ಪ್ರಯತ್ನ ಮಾಡಿರುವ ಹಿನ್ನೆಲೆ ಕವಲಂದೆ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಮಹೇಂದ್ರ ಬಿ ಅವರು ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಮೈಸೂರಿನ ೭ನೇ ‘ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಎಂ.ರಮೇಶ ರವರು ವಿಚಾರಣೆ ನಡೆಸಿ, ಸಾಕ್ಷಿಗಳನ್ನು ಪರಿಗಣಿಸಿ ಆರೋಪಿತನ ಮೇಲಿನ ಆರೋಪ ದೃಢಪಟ್ಟ ಮೇರೆಗೆ ಆರೋಪಿತನಿಗೆ ಕಲಂ ೩೦೭ ಐಪಿಸಿ ಅಡಿಯಲ್ಲಿ ೨ ವರ್ಷ ಕಠಿಣ ಶಿಕ್ಷೆ ಮತ್ತು ರೂ.೧೦,೦೦೦ ದಂಡ ಹಾಗೂ ಕಲಂ ೫೦೪ ಐಪಿಸಿ ಅಡಿಯಲ್ಲಿ ೬ ತಿಂಗಳ ಸಾದಾ ಸಜೆ ಮತ್ತು ರೂ.೧,೦೦೦ ದಂಡವನ್ನು ವಿಧಿಸಿ ಶಿಕ್ಷೆ ನೀಡಲಾಗಿದ್ದು, ಮೈಸೂರಿನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆರೋಪಿಯು ಕಾನೂನು ರೀತ್ಯಾ ಪರಿಹಾರ ನೀಡಬೇಕು ಎಂದು ಆದೇಶಿಸಲಾಗಿದೆ ಎಂದು ೭ನೇ ಅಧಿಕ ಸರ್ಕಾರಿ ಆಯೋಜಕರಾದ ಕೆ.ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.