ಮೈಸೂರು: ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಇಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಹತ್ತು ವರ್ಷದಲ್ಲಿ ಬಿಜೆಪಿ ಏನು ಮಾಡಿದೆ? ರಾಮ ಮಂದಿರ ಕಟ್ಟಿದ್ದೆ ಸಾಧನೆ. ಅಣ್ಣ ತಮ್ಮಂದಿರಂತೆ ಬದುಕುವವರ ಮಧ್ಯೆ ಬಿಜೆಪಿ ಹಿಂದುತ್ವದ ವಿಷ ಬೀಜ ಬಿತ್ತಿದೆ. ಆ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದೇ ಅವರ ಸಾಧನೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲೆಡೆ ಟಿಕೆಟ್ ಘೋಷಣೆ ಮಾಡಿ ಕೊನೆಯಲ್ಲಿ ನಮ್ಮ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದೆ ಅಷ್ಟೆ. ನಮ್ಮಲ್ಲಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಇದ್ದು, ಹನೂರಿನಲ್ಲಿ ಕೂಡ ನಮ್ಮ ಬಲ ಹೆಚ್ಚಿದೆ. ಇದು ನನ್ನ ಗೆಲುವಿಗೆ ಅನುಕೂಲವಾ ಗಲಿದೆ. ಕಳೆದ ಬಾರಿ ಕೂಡ ನಾವು ಕಡಿಮೆ ಅಂತರದಲ್ಲಿ ಸೋತಿದ್ದೇವೆ. ನಮ್ಮಲ್ಲಿ ಯಾವುದೇ ಒಳ ಜಗಳ, ಬಣ ರಾಜಕೀಯ ಇಲ್ಲ ಎಂದರು.
ಬಣಗಳು ಇದ್ದಿದ್ದರೆ ದರ್ಶನ್ ಧ್ರುವನಾರಾಯಣ್ 45 ಸಾವಿರ ಮತದಿಂದ ಗೆಲ್ಲುತ್ತಿರಲಿಲ್ಲ. ಈಗ ಶಾಸಕ ದರ್ಶನ್ ಮುಂದಾಳತ್ವದಲ್ಲೇ ಅಲ್ಲಿ ಪ್ರಚಾರ ಮಾಡುತ್ತಾರೆ. ದೊಡ್ಡವರಿಗೆ ಮುನಿಸಿಲ್ಲ, ಆದರೆ ಸ್ಥಳೀಯವಾಗಿ ಭಿನ್ನಾಭಿಪ್ರಾಯ ಇರಬಹುದು. ಹಾಗಂತ ಯಾರೂ ಮನೆ ಒಡೆಯುವ ಕೆಲಸ ಮಾಡುವುದಿಲ್ಲ. ದರ್ಶನ್ ಕೂಡ ನಮಗೆ ಬಂದಷ್ಟು ಲೀಡ್ ಕೊಡಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ ಎಂದರು.
ಹಿರಿಯ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ಬೆಂಬಲ ಕೋರಿದ್ದೇನೆ. ಅವರ ಬೆಂಬಲ ಸಿಗುವ ನಿರೀಕ್ಷೆಯಿದೆ ಎಂದು ಸುನೀಲ್ ಬೋಸ್ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.