ಹುಬ್ಬಳ್ಳಿ: ರಾಜ್ಯದಲ್ಲಿ ಮಳೆಯಾಗಿಲ್ಲ ಎಂದರೆ ಅದಕ್ಕೆ ಪ್ರಧಾನಿ ಮೋದಿ, ಕೇಂದ್ರ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ಧರಾಮಯ್ಯ ಆರೋಪಿಸುವುದೊಂದೇ ಬಾಕಿ ಉಳಿದಿದೆ. ಅಂತಹ ಹೇಳಿಕೆಯೂ ಬರಬಹುದೆಂದು ಎದುರು ನೋಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಒಳ್ಳೆಯ ಕೆಲಸ ತಮ್ಮಿಂದ ಎನ್ನುವುದು, ಕೆಟ್ಟದಾಗಿದ್ದರೆ ಕೇಂದ್ರದ ಕಡೆ ಬೆರಳು ತೋರುವುದು ಸಿಎಂ ಕಾಯಕವಾಗಿದೆ. ಪುಣ್ಯಕ್ಕೆ ರಾಜ್ಯದಲ್ಲಿ ಮಳೆ ಆಗುವುದನ್ನು ಮೋದಿ ಅಡ್ಡಿಪಡಿಸಿದ್ದಾರೆ ಎಂದು ಹೇಳಿಲ್ಲವಷ್ಟೇ, ಅದನ್ನು ಹೇಳಬಹುದೇನೋ ಎಂದರು.
ಗೆಲ್ಲುವ ಪಕ್ಷದಲ್ಲಿ ಟಿಕೆಟ್ ಪೈಪೋಟಿ, ಸ್ವಲ್ಪ ಗೊಂದಲ, ಅಸಮಾಧಾನ ಸಹಜ. ಚಿತ್ರದುರ್ಗ ಸೇರಿದಂತೆ ವಿವಿಧ ಕಡೆಯ ಅಸಮಾಧಾನ ಶಮನ ಪ್ರಕ್ರಿಯೆ ನಡೆದಿದೆ. ಅಸಮಾಧಾನ ಶಮನಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶಸ್ತ್ರಚಿಕಿತ್ಸೆ ಬಗ್ಗೆ ವ್ಯಂಗ್ಯ ವಾಡಿರುವುದು ಸರಿಯಲ್ಲ. ಆರೋಗ್ಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು, ಇದು ಒಳ್ಳೆ ಲಕ್ಷಣವಲ್ಲ ಎಂದರು.
ಮಠಾಧೀಶರ ಹೇಳಿಕೆ ಬಗ್ಗೆ ನಾನು ಹೆಚ್ಚಿನದೇನು ಹೇಳುವುದಿಲ್ಲ. ಮಠಾಧೀಶರು ಹೇಳಿಕೆ ನೀಡಿ ನಂತರ ಒತ್ತಡದಿಂದ ಹೇಳಿದೆ ಎಂಬುದರ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಜೋಶಿ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.